ರಾಜ್ಯದ ಮೊದಲ ಕಿಸಾನ್ ರೈಲು 19ರಿಂದ ಬೆಂಗಳೂರಿನಿಂದ ಆರಂಭ

ಹುಬ್ಬಳ್ಳಿ: ಈ ಬಾರಿಯ ಬಜೆಟ್ನಲ್ಲಿ ಮಂಡಿಸಲಾಗಿದ್ದ ಕಿಸಾನ್ ವಿಶೇಷ ರೈಲು ರಾಜ್ಯದಿಂದ ಸೆ. 19ರಿಂದ ಅ. 17ರ ತನಕ ಪ್ರತಿ ಶನಿವಾರ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಸಂಚಾರ ಆರಂಭಿಸಲಿದೆ. ಅಂದು ಮಧ್ಯಾಹ್ನ 4.45ಕ್ಕೆ ಬೆಂಗಳೂರಿನಿಂದ ಹೊರಟು ಸೋಮುವಾರ ರಾತ್ರಿ 11.45ಕ್ಕೆ ನಿಜಾಮುದ್ದೀನ್ ತಲುಪಲಿದೆ.
ಸೆ. 22ರಿಂದ ಅ. 20ರ ತನಕ ಪ್ರತಿ ಮಂಗಳವಾರ ಸಂಜೆ 5.45ಕ್ಕೆ ನಿಜಾಮುದ್ದೀನ್ನಿಂದ ಹೊರಟು ಶುಕ್ರವಾರ ಮಧ್ಯರಾತ್ರಿ 1.45ಕ್ಕೆ ಬೆಂಗಳೂರು ಮುಟ್ಟಲಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
ಈ ರೈಲಿನಲ್ಲಿ ಹಾಲು, ಮಾಂಸ ಮತ್ತು ಮೀನು ಸೇರಿದಂತೆ ಬಹಳಷ್ಟು ದಿನಗಳವರೆಗೆ ಕೆಡದ ವಸ್ತುಗಳನ್ನು ಸಾಗಿಸಲಾಗುತ್ತದೆ. ರೈಲ್ವೆ ಇಲಾಖೆ ಸಾರ್ವಜನಿಕ ಮತ್ತು ಖಾಸಗಿ ಸಹಯೋಗದಲ್ಲಿ ಈ ಸೌಲಭ್ಯ ಆರಂಭಿಸಿದೆ. ಬಹುವಿಧದ ಸರಕುಗಳು, ಸಾಗಣೆದಾರರು ಮತ್ತು ಗ್ರಾಹಕರಿಂದ ಕೂಡಿದ ರೈಲು ಇದಾಗಿದೆ. ಆದರೆ, ಪ್ರಯಾಣಿಕರ ಸಂಚಾರಕ್ಕೆ ಅವಕಾಶವಿಲ್ಲ.
ಇದನ್ನೂ ಓದಿ: ರೈತರ ಅನುಕೂಲಕ್ಕಾಗಿ ಕಿಸಾನ್ ರೈಲು ಯೋಜನೆ: ಪ್ರಧಾನಿ ಮೋದಿ
ವಿಶೇಷ ರೈಲು 10 ವಿಪಿಎಚ್ (ಅಧಿಕ ಸಾಮರ್ಥ್ಯದ ಪಾರ್ಸಲ್ ವ್ಯಾನ್) ಹೊಂದಿದೆ. ಮೈಸೂರು, ಹಾಸನ, ಅರಸೀಕೆರೆ, ದಾವಣಗೆರೆ, ಹುಬ್ಬಳ್ಳಿ, ಲೋಂಡಾ, ಬೆಳಗಾವಿ, ಮೀರಜ್, ಪುಣೆ, ಮನ್ಮಾಡ್, ಭೂಸಾವಾಲ್, ಇಟಾರ್ಸಿ, ಭೋಪಾಲ್, ಝಾನ್ಸಿ, ಆಗ್ರಾ ಕಂಟೋನ್ಮೆಂಟ್ ಮತ್ತು ಮಥುರಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ಎಲ್ಲ ನಿಲ್ದಾಣಗಳಲ್ಲಿ ಸರಕು ಲೋಡ್ ಮತ್ತು ಅನ್ಲೋಡ್ ಮಾಡಲು ಅವಕಾಶವಿದೆ. ರೈತರು ತಮ್ಮ ಸರಕುಗಳಿಗೆ ಸೂಕ್ತ ಬೆಲೆ ಪಡೆಯಲು ಹೊಸ ರೈಲಿನ ಸೌಲಭ್ಯ ಪಡೆದುಕೊಳ್ಳಬೇಕು ಎಂದು ರೈಲ್ವೆ ಇಲಾಖೆ ಕೋರಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.