<p>ನವಲಗುಂದ: ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ಐದು ದಿನಗಳ ಕಾಲ ಗುಡುಗು– ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಸಹಾಯಕ ಕೃಷಿ ನಿರ್ದೇಶಕ ಶ್ರೀನಾಥ್ ಚಿಮ್ಮಲಗಿ ತಿಳಿಸಿದ್ದಾರೆ.</p>.<p>ನವಲಗುಂದ ತಾಲ್ಲೂಕಿನಲ್ಲಿ ವಾಡಿಕೆಯ ಶೇ 45ರಷ್ಟು ಹಾಗೂ ಅಣ್ಣಿಗೇರಿಯಲ್ಲಿ ಶೇ 39ರಷ್ಟು ಹೆಚ್ಚು ಮಳೆಯಾಗಿದೆ.</p>.<p>‘ಬೆಳೆ ಹಾನಿಯಾದರೆ ಮಳೆಯಾಗಿ 72 ಗಂಟೆಯಲ್ಲಿ ಕೃಷಿ ಇಲಾಖೆ ಕಚೇರಿಗೆ ಬಂದು ಅರ್ಜಿ ಸಲ್ಲಿಸಬಹುದು’ ಎಂದು ತಿಳಿಸಿದ್ದಾರೆ.</p>.<p>‘ತಾಲ್ಲೂಕಿನಾದ್ಯಂತ ಹೆಸರು, ಶೇಂಗಾ, ಹತ್ತಿ, ಈರುಳ್ಳಿ, ಮೆಣಸಿನಕಾಯಿ, ಗೋವಿನ ಜೋಳದ ಬೆಳೆಗಳು ನಾಶವಾಗಿವೆ. ಬೆಣ್ಣೆಹಳ್ಳ ಹಾಗೂ ತುಪ್ಪರಿ ಹಳ್ಳದ ಹೆಚ್ಚಿನ ಹರಿವಿನಿಂದಾಗಿ ರೈತರು ಬೆಳೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ’ ಎಂದು ರೈತ ಮುಖಂಡ ಮಾಬುಸಾಬ ಯರಗುಪ್ಪಿ ಹೇಳಿದ್ದಾರೆ.</p>.<p>‘ರಾಜ್ಯ ಸರ್ಕಾರ ಈ ಕೂಡಲೇ ರೈತರ ಖಾತೆಗೆ ಪ್ರತಿ ಹೆಕ್ಟೇರ್ಗೆ ₹50 ಸಾವಿರ ಪರಿಹಾರದ ಹಣ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವಲಗುಂದ: ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ಐದು ದಿನಗಳ ಕಾಲ ಗುಡುಗು– ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಸಹಾಯಕ ಕೃಷಿ ನಿರ್ದೇಶಕ ಶ್ರೀನಾಥ್ ಚಿಮ್ಮಲಗಿ ತಿಳಿಸಿದ್ದಾರೆ.</p>.<p>ನವಲಗುಂದ ತಾಲ್ಲೂಕಿನಲ್ಲಿ ವಾಡಿಕೆಯ ಶೇ 45ರಷ್ಟು ಹಾಗೂ ಅಣ್ಣಿಗೇರಿಯಲ್ಲಿ ಶೇ 39ರಷ್ಟು ಹೆಚ್ಚು ಮಳೆಯಾಗಿದೆ.</p>.<p>‘ಬೆಳೆ ಹಾನಿಯಾದರೆ ಮಳೆಯಾಗಿ 72 ಗಂಟೆಯಲ್ಲಿ ಕೃಷಿ ಇಲಾಖೆ ಕಚೇರಿಗೆ ಬಂದು ಅರ್ಜಿ ಸಲ್ಲಿಸಬಹುದು’ ಎಂದು ತಿಳಿಸಿದ್ದಾರೆ.</p>.<p>‘ತಾಲ್ಲೂಕಿನಾದ್ಯಂತ ಹೆಸರು, ಶೇಂಗಾ, ಹತ್ತಿ, ಈರುಳ್ಳಿ, ಮೆಣಸಿನಕಾಯಿ, ಗೋವಿನ ಜೋಳದ ಬೆಳೆಗಳು ನಾಶವಾಗಿವೆ. ಬೆಣ್ಣೆಹಳ್ಳ ಹಾಗೂ ತುಪ್ಪರಿ ಹಳ್ಳದ ಹೆಚ್ಚಿನ ಹರಿವಿನಿಂದಾಗಿ ರೈತರು ಬೆಳೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ’ ಎಂದು ರೈತ ಮುಖಂಡ ಮಾಬುಸಾಬ ಯರಗುಪ್ಪಿ ಹೇಳಿದ್ದಾರೆ.</p>.<p>‘ರಾಜ್ಯ ಸರ್ಕಾರ ಈ ಕೂಡಲೇ ರೈತರ ಖಾತೆಗೆ ಪ್ರತಿ ಹೆಕ್ಟೇರ್ಗೆ ₹50 ಸಾವಿರ ಪರಿಹಾರದ ಹಣ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>