ಹುಬ್ಬಳ್ಳಿ: ನಟ ದಿವಂಗತ ಪುನೀತ್ ರಾಜ್ಕುಮಾರ್ ನೇತ್ರದಾನ ಮಾಡಿದ ಬಳಿಕ ಜನರಲ್ಲಿ ಕಣ್ಣುಗಳ ದಾನದ ಬಗ್ಗೆ ಜಾಗೃತಿ ಹೆಚ್ಚಾಗುತ್ತಿದ್ದು, ಹಿಂದಿನ 10 ದಿನಗಳಲ್ಲಿ 500ಕ್ಕೂ ಹೆಚ್ಚು ಜನ ನೇತ್ರದಾನದ ಬಗ್ಗೆ ವಿಚಾರಣೆ ಮಾಡಲು ಕರೆ ಮಾಡಿದ್ದಾರೆ ಎಂದು ನಗರದ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ನಿರ್ದೇಶಕ ಶ್ರೀನಿವಾಸ ಜೋಶಿ ತಿಳಿಸಿದ್ದಾರೆ.