ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಬೀಟ್‌ ವ್ಯಾಪ್ತಿಯಲ್ಲಿ ಧ್ವಜಾರೋಹಣ, ಸಿದ್ಧತೆ

ಶೇ 60ರಷ್ಟು ಸಿಬ್ಬಂದಿ ಅಸಮಾಧಾನ
Last Updated 10 ಆಗಸ್ಟ್ 2022, 8:34 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಮನೆ ಮನೆಯಲ್ಲಿ ತ್ರಿವರ್ಣ ಧ್ವಜ’ ಅಭಿಯಾನಕ್ಕೆ ಪೂರಕವಾಗಿ ನಗರದ ಗೋಕುಲ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ‘ಪ್ರತಿ ಬೀಟ್‌ನಲ್ಲಿಯೂ ಧ್ವಜಾರೋಹಣ’ ಯೋಜನೆ ಹಮ್ಮಿಕೊಳ್ಳಲಾಗಿದೆ.

ಇನ್‌ಸ್ಪೆಕ್ಟರ್‌ ಜೆ.ಎಂ. ಕಾಲಿಮಿರ್ಚಿ ಯೋಜನೆಯ ರೂವಾರಿಯಾಗಿದ್ದು, ತಮ್ಮ ವ್ಯಾಪ್ತಿಯಲ್ಲಿನ 63 ಬೀಟ್‌ಗಳಲ್ಲಿಯೂ ತ್ರಿವರ್ಣ ಧ್ವಜ ಹಾರಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕೆಲವು ಸಿಬ್ಬಂದಿ ತಮ್ಮ ಬೀಟ್‌ ವ್ಯಾಪ್ತಿಯಲ್ಲಿ ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಪೊಲೀಸ್‌ ಕಮಿಷನರೇಟ್‌ ಘಟಕದ ವ್ಯಾಪ್ತಿಯಲ್ಲಿಯೇ ಮಾದರಿ ಸ್ವಾತಂತ್ರ್ಯೋತ್ಸವಕ್ಕೆ ಅಣಿಯಾಗುತ್ತಿದ್ದಾರೆ. ಆದರೆ, ಶೇ 60ರಷ್ಟು ಸಿಬ್ಬಂದಿ ಇನ್‌ಸ್ಪೆಕ್ಟರ್‌ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

‘ರಾಷ್ಟ್ರಪ್ರೇಮ ಇರುವ ಪ್ರತಿಯೊಬ್ಬರೂ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತಾರೆ. ಆದರೆ, ಬೀಟ್‌ ವ್ಯಾಪ್ತಿಯಲ್ಲಿ ಧ್ವಜಾರೋಹಣ ನಡೆಸಬೇಕೆಂದು ಸೂಚನೆ ನೀಡುವ ಅಗತ್ಯವೇನಿದೆ? ಯಾವೆಲ್ಲ ಪೂರ್ವ ಸಿದ್ಧತೆ ಮಾಡಲಾಗುತ್ತಿದೆ ಎನ್ನುವ ಮಾಹಿತಿಯನ್ನು ಪ್ರತಿದಿನವೂ ಎಎಸ್‌ಐ, ಪಿಎಸ್ಐ ಅವರಿಗೆ ತಲುಪಿಸಬೇಕು. ರಾಷ್ಟ್ರಧ್ವಜ, ಕಂಬ, ಅದರ ಗುಂಡಿ ತೆಗೆಯಲು ಹಾಗೂ ಧ್ವಜಾರೋಹಣಕ್ಕೆ ಬಂದವರಿಗೆ ಸಿಹಿ ವಿತರಿಸಲು ಕನಿಷ್ಠ ₹2 ಸಾವಿರವಾದರೂ ವೆಚ್ಚವಾಗುತ್ತದೆ. ಅದನ್ನು ಬೀಟ್‌ ಪೊಲೀಸರೇ ಭರಿಸಬೇಕು. ಸಿಬ್ಬಂದಿಗೆ ಒತ್ತಡ ಹೇರುತ್ತ ಕಿರಿಕಿರಿ ನೀಡಲಾಗುತ್ತಿದೆ’ ಎಂದು ಹೆಸರು ಹೇಳಲಿಚ್ಛಿಸದ ಸಿಬ್ಬಂದಿಯೊಬ್ಬರು ತಿಳಿಸಿದರು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪೊಲೀಸ್‌ ಕಮಿಷನರ್‌ ಲಾಭೂರಾಮ್‌, ‘ಬೀಟ್‌ ವ್ಯಾಪ್ತಿಯಲ್ಲಿ ಧ್ವಜಾರೋಹಣ ನಡೆಸುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಆ ಕುರಿತು ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT