<p><strong>ಅಳ್ನಾವರ:</strong> ‘ಮನುಷ್ಯನ ದೈನಂದಿನ ಚಟುವಟಿಕೆಗಳ ಪ್ರತಿಯೊಂದು ಹಂತದಲ್ಲಿ ಜಾನಪದ ಹಾಸುಹೊಕ್ಕಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಜನರ ಬದುಕಲ್ಲಿ ಜಾನಪದ ಸೊಗಡು ಅಡಗಿದ್ದು, ಇದನ್ನು ಉಳಿಸಿ ಬೆಳೆಸಬೇಕು’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪದ ಹೂಲಿಕೇರಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದಲ್ಲಿ ‘ಗ್ರಾಮೀಣ ಬದುಕಲ್ಲಿ ಜಾನಪದ’ ಕುರಿತು ಗುರುವಾರ ಉಪನ್ಯಾಸ ನೀಡಿ, ‘ಆಧುನಿಕ ಬದುಕಿನಿಂದ ಜಾನಪದ ನಶಿಸುತ್ತಿದೆ. ಪ್ರಾಚೀನ ಕಲೆಗಳನ್ನು ಉಳಿಸಿಕೊಳ್ಳಬೇಕು. ಆಧುನಿಕತೆಯ ಭರಾಟೆಯಲ್ಲಿ ಈ ನೆಲದ ಸಾಹಿತ್ಯ ಕಲೆಗಳು ಕಳೆದು ಹೋಗುತ್ತಿವೆ. ಜಾನಪದ ಎಂದರೆ ಅಶ್ಲೀಲ ಹಾಡುಗಳು ಎನ್ನುವ ಮಟ್ಟಕ್ಕೆ ಅವುಗಳನ್ನು ಹಾಳು ಮಾಡುತ್ತಿದ್ದಾರೆ’ ಎಂದು ವಿಷಾದಿಸಿದರು.</p>.<p>ಹಳಿಯಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪಿ.ಕೆ. ನಾಗರಾಳ ಮಾತನಾಡಿ, ‘ಮನುಷ್ಯನ ಸ್ವಾರ್ಥಕ್ಕೆ ಪರಿಸರ ನಾಶವಾಗುತ್ತಿದೆ. ಗಾಳಿಯನ್ನು ಖರೀದಿಸಿ ಸೇವಿಸುವ ಕಾಲ ಬರಬಹುದು, ಈಗಲೇ ಎಚ್ಚೆತ್ತುಕೊಂಡು ಅರಣ್ಯ ಬೆಳೆಸುವ ಪ್ರವೃತ್ತಿ ರೂಢಿಸಿಕೊಳ್ಳಬೇಕು’ ಎಂದರು.</p>.<p>ಪರಿಸರವಾದಿ ಶಂಕರ ಕುಂಬಿ ಮಾತನಾಡಿ, ‘ಪ್ಲಾಸ್ಟಿಕ್ ಬಳಕೆ ಮಾನವನ ಬದುಕಿನ ಭಾಗವಾಗಿದ್ದು, ಅಪಾಯಕಾರಿ ಬೆಳವಣಿಗೆ. ಗಿಡಗಳನ್ನು ನೆಡುವ ನೆಪದಲ್ಲಿ ನಿರುಪಯುಕ್ತವಾದ ಆಕರ್ಷಣೀಯ ಗಿಡಗಳನ್ನು ಬೆಳೆಸುತ್ತಿದ್ದಾರೆ. ಬದಲಿಗೆ ಪ್ರಾಣಿಪಕ್ಷಿಗಳಿಗೆ ಅನುಕೂಲವಾಗುವಂತೆ ಹಣ್ಣಿನ ಗಿಡಗಳನ್ನು ನೆಡಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ ಹಾಗೂ ಎನ್ಎಸ್ಎಸ್ ಅಧಿಕಾರಿ ಈರಪ್ಪ ಪತ್ತಾರ ಮಾತನಾಡಿದರು.</p>.<p>ಆನಂದ ಸಬನೀಸ್, ಡಾ.ಸೌಂದರ್ಯ ಕಿತ್ತೂರ (ಗುರವ) ದಂಪತಿ, ಬಸವರಾಜ ಕುಬಸದ, ಶಿವನಪ್ಪ ಅಗಸರ, ಬಸವರಾಜ ಕಿತ್ತೂರ, ನಾಗಪ್ಪ ರಾಧಣ್ಣವರ, ಈರಪ್ಪ ತಾರೊಳ್ಳಿ, ಸಂತೋಷ ಕಂಬಾರ, ಶಂಕರ ಕುಮಾರ, ನಿಂಗಪ್ಪ ಹೂಗಾರ, ದೇವೇಂದ್ರ ತಳವಾರ, ವಿ.ಬಿ. ಪಾಟೀಲ ಇದ್ದರು.</p>.<p>ಇಮಾಮಸಾಬ ವಲ್ಲೆಪ್ಪನವರ ತಂಡದವರು ಜಾನಪದ ಹಾಡುಗಳನ್ನು ಪ್ರಸ್ತುತ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ:</strong> ‘ಮನುಷ್ಯನ ದೈನಂದಿನ ಚಟುವಟಿಕೆಗಳ ಪ್ರತಿಯೊಂದು ಹಂತದಲ್ಲಿ ಜಾನಪದ ಹಾಸುಹೊಕ್ಕಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಜನರ ಬದುಕಲ್ಲಿ ಜಾನಪದ ಸೊಗಡು ಅಡಗಿದ್ದು, ಇದನ್ನು ಉಳಿಸಿ ಬೆಳೆಸಬೇಕು’ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪದ ಹೂಲಿಕೇರಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದಲ್ಲಿ ‘ಗ್ರಾಮೀಣ ಬದುಕಲ್ಲಿ ಜಾನಪದ’ ಕುರಿತು ಗುರುವಾರ ಉಪನ್ಯಾಸ ನೀಡಿ, ‘ಆಧುನಿಕ ಬದುಕಿನಿಂದ ಜಾನಪದ ನಶಿಸುತ್ತಿದೆ. ಪ್ರಾಚೀನ ಕಲೆಗಳನ್ನು ಉಳಿಸಿಕೊಳ್ಳಬೇಕು. ಆಧುನಿಕತೆಯ ಭರಾಟೆಯಲ್ಲಿ ಈ ನೆಲದ ಸಾಹಿತ್ಯ ಕಲೆಗಳು ಕಳೆದು ಹೋಗುತ್ತಿವೆ. ಜಾನಪದ ಎಂದರೆ ಅಶ್ಲೀಲ ಹಾಡುಗಳು ಎನ್ನುವ ಮಟ್ಟಕ್ಕೆ ಅವುಗಳನ್ನು ಹಾಳು ಮಾಡುತ್ತಿದ್ದಾರೆ’ ಎಂದು ವಿಷಾದಿಸಿದರು.</p>.<p>ಹಳಿಯಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪಿ.ಕೆ. ನಾಗರಾಳ ಮಾತನಾಡಿ, ‘ಮನುಷ್ಯನ ಸ್ವಾರ್ಥಕ್ಕೆ ಪರಿಸರ ನಾಶವಾಗುತ್ತಿದೆ. ಗಾಳಿಯನ್ನು ಖರೀದಿಸಿ ಸೇವಿಸುವ ಕಾಲ ಬರಬಹುದು, ಈಗಲೇ ಎಚ್ಚೆತ್ತುಕೊಂಡು ಅರಣ್ಯ ಬೆಳೆಸುವ ಪ್ರವೃತ್ತಿ ರೂಢಿಸಿಕೊಳ್ಳಬೇಕು’ ಎಂದರು.</p>.<p>ಪರಿಸರವಾದಿ ಶಂಕರ ಕುಂಬಿ ಮಾತನಾಡಿ, ‘ಪ್ಲಾಸ್ಟಿಕ್ ಬಳಕೆ ಮಾನವನ ಬದುಕಿನ ಭಾಗವಾಗಿದ್ದು, ಅಪಾಯಕಾರಿ ಬೆಳವಣಿಗೆ. ಗಿಡಗಳನ್ನು ನೆಡುವ ನೆಪದಲ್ಲಿ ನಿರುಪಯುಕ್ತವಾದ ಆಕರ್ಷಣೀಯ ಗಿಡಗಳನ್ನು ಬೆಳೆಸುತ್ತಿದ್ದಾರೆ. ಬದಲಿಗೆ ಪ್ರಾಣಿಪಕ್ಷಿಗಳಿಗೆ ಅನುಕೂಲವಾಗುವಂತೆ ಹಣ್ಣಿನ ಗಿಡಗಳನ್ನು ನೆಡಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ ಹಾಗೂ ಎನ್ಎಸ್ಎಸ್ ಅಧಿಕಾರಿ ಈರಪ್ಪ ಪತ್ತಾರ ಮಾತನಾಡಿದರು.</p>.<p>ಆನಂದ ಸಬನೀಸ್, ಡಾ.ಸೌಂದರ್ಯ ಕಿತ್ತೂರ (ಗುರವ) ದಂಪತಿ, ಬಸವರಾಜ ಕುಬಸದ, ಶಿವನಪ್ಪ ಅಗಸರ, ಬಸವರಾಜ ಕಿತ್ತೂರ, ನಾಗಪ್ಪ ರಾಧಣ್ಣವರ, ಈರಪ್ಪ ತಾರೊಳ್ಳಿ, ಸಂತೋಷ ಕಂಬಾರ, ಶಂಕರ ಕುಮಾರ, ನಿಂಗಪ್ಪ ಹೂಗಾರ, ದೇವೇಂದ್ರ ತಳವಾರ, ವಿ.ಬಿ. ಪಾಟೀಲ ಇದ್ದರು.</p>.<p>ಇಮಾಮಸಾಬ ವಲ್ಲೆಪ್ಪನವರ ತಂಡದವರು ಜಾನಪದ ಹಾಡುಗಳನ್ನು ಪ್ರಸ್ತುತ ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>