ಹುಬ್ಬಳ್ಳಿ: ‘ಸಮಾಜದ ಸುಧಾರಣೆಗೆ ಶಂಕರಾಚಾರ್ಯರ ಕೊಡುಗೆ ಅಪಾರ. ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಹೇಳಿದರು.
ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಶಂಕರಾಚಾರ್ಯರ ಬೋಧನೆಗಳು ನಮಗೆ ದಾರಿ ದೀಪವಾಗಿವೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು. ಅವರ ತತ್ವಗಳು ಸಾರ್ವಕಾಲಿಕವಾಗಿವೆ. ಶಂಕರಾಚಾರ್ಯರು ವೇದಕಾಲದಿಂದಲೂ ಪ್ರಚಲಿತವಿರುವ ಅದ್ವೈತ ಸಿದ್ಧಾಂತ ಪ್ರತಿಪಾದಿಸಿದರು. ಮಾನವ ಕುಲಕ್ಕೆ ಜ್ಞಾನ ನೀಡಿದರು’ ಎಂದರು.