<p><strong>ಧಾರವಾಡ</strong>: ‘ದೇಶದಲ್ಲಿ 1950ರಿಂದ 2020ರ ಅವಧಿಯಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಏರಿಕೆಯಾಗಿದೆ’ ಎಂದು ಹೈದರಾಬಾದ್ ಪತಂಚೇರು ಅರೆ-ಶುಷ್ಕ ಉಷ್ಣವಲಯದ ಅಂತರರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಹಿಮಾಂಶು ಪಾಠಕ್ ಹೇಳಿದರು.</p>.<p>ಎಸ್.ಡಬ್ಲೂ.ಮೆಣಸಿನಕಾಯಿ ಮೆಮೊರಿಯಲ್ ಎಜ್ಯುಕೇಶನ್ ಮತ್ತು ರಿಸರ್ಚ ಫೌಂಡೇಶನ್ ವತಿಯಿಂದ ಪ್ರೊ. ಎಸ್.ಡಬ್ಲು.ಮೆಣಸಿನಕಾಯಿ ಅವರ ಜನ್ಮದಿನಾಚರಣೆ ನಿಮಿತ್ತ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಈಚೆಗೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ದೇಶದಲ್ಲಿ ಎಣ್ಣೆಕಾಳುಗಳು, ಧಾನ್ಯಗಳು, ಮೊಟ್ಟೆ, ಹಾಲು, ತೋಟಗಾರಿಕಾ ಬೆಳೆಗಳ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಭಾರತವು ಇಂದು ಪ್ರಮುಖ ರಫ್ತು ದೇಶಗಳಲ್ಲೊಂದಾಗಿದೆ’ ಎಂದು ತಿಳಿಸಿದರು.</p>.<p>‘ಭವಿಷ್ಯದಲ್ಲಿ ಕೃಷಿಯ ಸವಾಲುಗಳನ್ನು ಎದುರಿಸಲು ಕೃತಕ ಬುದ್ಧಿಮತ್ತೆ, ಜೀನೋಮ್ ಎಡಿಟಿಂಗ್, ಜಿನೊಮಿಕ್ಸ್, ಫಿನೊಮಿಕ್ಸ್, ಯಂತ್ರ ಅಧ್ಯಯನ, ರೊಬೊಟಿಕ್ಸ್, ಡ್ರೋನ್ಗಳು, ದತ್ತಾಂಶ ವಿಶ್ಲೇಷಣೆ ಮುಂತಾದ ತಂತ್ರಜ್ಞಾನಗಳ ಮಹತ್ವದ ಪಾತ್ರ ವಹಿಸಲಿವೆ’ ಎಂದರು.</p>.<p>ಕುಲಪತಿ ಪ್ರೊ. ಪಿ.ಎಲ್.ಪಾಟೀಲ ಮಾತನಾಡಿ, ‘ಎಸ್.ಡಬ್ಲು. ಮೆಣಸಿನಕಾಯಿ ಅವರ ದೂರದೃಷ್ಟಿ ಮತ್ತು ಪರಿಶ್ರಮದ ಫಲದಿಂದ ಕೃಷಿ ವಿಶ್ವವಿದ್ಯಾಲಯ ಉನ್ನತಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ’ ಎಂದರು.</p>.<p>ವಿ.ಬಿ.ಕುಲಿಗೋಡ, ಎಸ್.ಎ.ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ದೇಶದಲ್ಲಿ 1950ರಿಂದ 2020ರ ಅವಧಿಯಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಏರಿಕೆಯಾಗಿದೆ’ ಎಂದು ಹೈದರಾಬಾದ್ ಪತಂಚೇರು ಅರೆ-ಶುಷ್ಕ ಉಷ್ಣವಲಯದ ಅಂತರರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಹಿಮಾಂಶು ಪಾಠಕ್ ಹೇಳಿದರು.</p>.<p>ಎಸ್.ಡಬ್ಲೂ.ಮೆಣಸಿನಕಾಯಿ ಮೆಮೊರಿಯಲ್ ಎಜ್ಯುಕೇಶನ್ ಮತ್ತು ರಿಸರ್ಚ ಫೌಂಡೇಶನ್ ವತಿಯಿಂದ ಪ್ರೊ. ಎಸ್.ಡಬ್ಲು.ಮೆಣಸಿನಕಾಯಿ ಅವರ ಜನ್ಮದಿನಾಚರಣೆ ನಿಮಿತ್ತ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಈಚೆಗೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ದೇಶದಲ್ಲಿ ಎಣ್ಣೆಕಾಳುಗಳು, ಧಾನ್ಯಗಳು, ಮೊಟ್ಟೆ, ಹಾಲು, ತೋಟಗಾರಿಕಾ ಬೆಳೆಗಳ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಭಾರತವು ಇಂದು ಪ್ರಮುಖ ರಫ್ತು ದೇಶಗಳಲ್ಲೊಂದಾಗಿದೆ’ ಎಂದು ತಿಳಿಸಿದರು.</p>.<p>‘ಭವಿಷ್ಯದಲ್ಲಿ ಕೃಷಿಯ ಸವಾಲುಗಳನ್ನು ಎದುರಿಸಲು ಕೃತಕ ಬುದ್ಧಿಮತ್ತೆ, ಜೀನೋಮ್ ಎಡಿಟಿಂಗ್, ಜಿನೊಮಿಕ್ಸ್, ಫಿನೊಮಿಕ್ಸ್, ಯಂತ್ರ ಅಧ್ಯಯನ, ರೊಬೊಟಿಕ್ಸ್, ಡ್ರೋನ್ಗಳು, ದತ್ತಾಂಶ ವಿಶ್ಲೇಷಣೆ ಮುಂತಾದ ತಂತ್ರಜ್ಞಾನಗಳ ಮಹತ್ವದ ಪಾತ್ರ ವಹಿಸಲಿವೆ’ ಎಂದರು.</p>.<p>ಕುಲಪತಿ ಪ್ರೊ. ಪಿ.ಎಲ್.ಪಾಟೀಲ ಮಾತನಾಡಿ, ‘ಎಸ್.ಡಬ್ಲು. ಮೆಣಸಿನಕಾಯಿ ಅವರ ದೂರದೃಷ್ಟಿ ಮತ್ತು ಪರಿಶ್ರಮದ ಫಲದಿಂದ ಕೃಷಿ ವಿಶ್ವವಿದ್ಯಾಲಯ ಉನ್ನತಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ’ ಎಂದರು.</p>.<p>ವಿ.ಬಿ.ಕುಲಿಗೋಡ, ಎಸ್.ಎ.ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>