ಸಂಘದ ಜಿಲ್ಲಾ ಕಾರ್ಯದರ್ಶಿ ರಮೇಶ ಹೊಸಮನಿ ಮಾತನಾಡಿ ‘ವಿದ್ಯುತ್ ಕಾಯ್ದೆ ತಿದ್ದುಪಡಿ ಮಸೂದೆಯಿಂದ ಒಂದೇ ಏಟಿಗೆ ಖಾಸಗಿ ಕುಳಗಳಿಗೆ ಒಪ್ಪಿಸುವ ದುರುದ್ದೇಶವನ್ನು ಸರ್ಕಾರ ಹೊಂದಿದೆ. ಇದರಿಂದ ಕೆಪಿಸಿಎಲ್, ಕೆಪಿಟಿಸಿಎಲ್, ಹೆಸ್ಕಾಂ, ಬೆಸ್ಕಾಂ, ಮೆಸ್ಕಾಂ, ಹಾಗೂ ಜೆಸ್ಕಾಂ ಕಾರ್ಪೊರೇಟ್ ಕಂಪನಿಗಳ ಕೈವಶವಾಗುತ್ತಿವೆ. ಬಡವರಿಗಾಗಿ ಇದ್ದ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆಗಳು ರದ್ದಾಗುತ್ತವೆ. ರೈತರ ಪಂಪ್ಸೆಟ್ಗಳಿಗೂ ಇದೇ ಗತಿಯಾದರೆ ಅನ್ನದಾತರು ಅಳಿವಿನ ಅಂಚಿಗೆ ಬರುತ್ತಾರೆ’ ಎಂದರು.