ನಗರದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದಾಗ ಸ್ವೇಚ್ವಾಚಾರವಾಗಿ ಎಲ್ಲವನ್ನೂ ಬದಲಾವಣೆ ಮಾಡುತ್ತೇವೆ ಎನ್ನುವುದು ದುರಹಂಕಾರದ ಮಾತು ಎಂದರು.
ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಕೈಯಲ್ಲಿ ಅಧಿಕಾರವಿದೆ. ಏನೇನು ಮಾಡುತ್ತಾರೊ ನೋಡೋಣ.
ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯವಾದರೆ ನಾವು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.