ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐವರು ಸಿಬಿಐ ಅಧಿಕಾರಿಗಳಿಂದ ಮಾಜಿ ಸಚಿವ ವಿನಯ ಕುಲಕರ್ಣಿ ವಿಚಾರಣೆ

Last Updated 7 ನವೆಂಬರ್ 2020, 5:16 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ನಗರದ ಗೋಕುಲ್ ರಸ್ತೆಯ ಬಳಿಯಿರುವ ಹೊಸ ಸಿಎಆರ್ ಮೈದಾನಕ್ಕೆ ಕರೆತಂದಿದ್ದಾರೆ.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಅವರನ್ನು ಸಿಬಿಐ ಅಧಿಕಾರಿಗಳ ತಂಡ ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದೆ. ಸಿಎಆರ್ ಮೈದಾನದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಹಾಕಲಾಗಿದೆ.

'ಐವರು ಸಿಬಿಐ ಅಧಿಕಾರಿಗಳು ವಿನಯ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಬೆಳಿಗ್ಗೆ 9.30ರ ವೇಳೆ ಅವರನ್ನು ಬೆಳಗಾವಿಯಿಂದ ಇಲ್ಲಿಗೆ ಕರೆದುಕೊಂಡು ಬರಲಾಗಿದೆ. ಅವರ ಜನ್ಮದಿನ ಇರುವುದರಿಂದ ಕಾರ್ಯಕರ್ತರು, ಅಭಿಮಾನಿಗಳು ಬರಬಹುದೆಂದು ಮೈದಾನದ ಸುತ್ತ ಬಂದೋಬಸ್ತ್ ಹಾಕಲಾಗಿದೆ. ಸಂಜೆ ವೇಳೆ ಧಾರವಾಡಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT