'ಐವರು ಸಿಬಿಐ ಅಧಿಕಾರಿಗಳು ವಿನಯ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಬೆಳಿಗ್ಗೆ 9.30ರ ವೇಳೆ ಅವರನ್ನು ಬೆಳಗಾವಿಯಿಂದ ಇಲ್ಲಿಗೆ ಕರೆದುಕೊಂಡು ಬರಲಾಗಿದೆ. ಅವರ ಜನ್ಮದಿನ ಇರುವುದರಿಂದ ಕಾರ್ಯಕರ್ತರು, ಅಭಿಮಾನಿಗಳು ಬರಬಹುದೆಂದು ಮೈದಾನದ ಸುತ್ತ ಬಂದೋಬಸ್ತ್ ಹಾಕಲಾಗಿದೆ. ಸಂಜೆ ವೇಳೆ ಧಾರವಾಡಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ' ಎಂದು ಪೊಲೀಸರು ತಿಳಿಸಿದ್ದಾರೆ.