<p><strong>ಹುಬ್ಬಳ್ಳಿ: </strong>ಕಳಸಾ ಬಂಡೂರಿ, ಮಹದಾಯಿ ಯೋಜನೆ ಕಾಮಗಾರಿ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನಾ ರ್ಯಾಲಿ ನಡೆಸಿದರು.</p>.<p>ರೈಲ್ವೆ ನಿಲ್ದಾಣದಿಂದ ಚನ್ನಮ್ಮ ವೃತ್ತದವರೆಗೆ ನೂರಾರು ರೈತರು ಪಾದಯಾತ್ರೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ಸಂಘದ ಅಧ್ಯಕ್ಷ ಸಿದ್ದರಾಜ ಕುಂದಗೋಳ, ‘ರಾಜಕೀಯ ಪಕ್ಷಗಳು ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದು, ನಂತರ ರೈತರನ್ನೇ ಸಂಪೂರ್ಣವಾಗಿ ಕಡೆಗಣಿಸುತ್ತವೆ. ಸಣ್ಣ ಸಮಸ್ಯೆಗಳಿಗೂ ಪ್ರತಿಭಟನೆ ನಡೆಸಿಯೇ ಪರಿಹಾರ ಕಂಡುಕೊಳ್ಳಬೇಕಿದೆ. ರೈತರ ಯಾವ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸುವುದಿಲ್ಲ. ಮಹದಾಯಿ ಯೋಜನೆ ಅನುಷ್ಠಾನಕ್ಕೆ ರೈತ ಸಂಘಟನೆಗಳು ನಿರಂತರ ಹೋರಾಟ ನಡೆಸುತ್ತಿವೆ. ಅದನ್ನು ರಾಜಕೀಯ ಪಕ್ಷಗಳು ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳುತ್ತಿವೆ’ ಎಂದು ಆರೋಪಿಸಿದರು.</p>.<p>‘ರೈತರಿಗೆ ಬೆಳೆ ವಿಮೆ ಪರಿಹಾರ ನೀಡಬೇಕು, ಕೃಷಿ ಕೂಲಿ ಕಾರ್ಮಿಕರ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಬೇಕು, 2018-19ರ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರ ಬಾಕಿ ಹಣ ಸಂದಾಯ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಶಿವಾನಂದ ಹೊಸಳ್ಳಿ, ಸೋಮಣ್ಣ ಎಸ್., ಈರನಗೌಡ ಪಾಟೀಲ, ಯಲಪ್ಪ ತಡಸದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಕಳಸಾ ಬಂಡೂರಿ, ಮಹದಾಯಿ ಯೋಜನೆ ಕಾಮಗಾರಿ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನಾ ರ್ಯಾಲಿ ನಡೆಸಿದರು.</p>.<p>ರೈಲ್ವೆ ನಿಲ್ದಾಣದಿಂದ ಚನ್ನಮ್ಮ ವೃತ್ತದವರೆಗೆ ನೂರಾರು ರೈತರು ಪಾದಯಾತ್ರೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ಸಂಘದ ಅಧ್ಯಕ್ಷ ಸಿದ್ದರಾಜ ಕುಂದಗೋಳ, ‘ರಾಜಕೀಯ ಪಕ್ಷಗಳು ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದು, ನಂತರ ರೈತರನ್ನೇ ಸಂಪೂರ್ಣವಾಗಿ ಕಡೆಗಣಿಸುತ್ತವೆ. ಸಣ್ಣ ಸಮಸ್ಯೆಗಳಿಗೂ ಪ್ರತಿಭಟನೆ ನಡೆಸಿಯೇ ಪರಿಹಾರ ಕಂಡುಕೊಳ್ಳಬೇಕಿದೆ. ರೈತರ ಯಾವ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸುವುದಿಲ್ಲ. ಮಹದಾಯಿ ಯೋಜನೆ ಅನುಷ್ಠಾನಕ್ಕೆ ರೈತ ಸಂಘಟನೆಗಳು ನಿರಂತರ ಹೋರಾಟ ನಡೆಸುತ್ತಿವೆ. ಅದನ್ನು ರಾಜಕೀಯ ಪಕ್ಷಗಳು ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳುತ್ತಿವೆ’ ಎಂದು ಆರೋಪಿಸಿದರು.</p>.<p>‘ರೈತರಿಗೆ ಬೆಳೆ ವಿಮೆ ಪರಿಹಾರ ನೀಡಬೇಕು, ಕೃಷಿ ಕೂಲಿ ಕಾರ್ಮಿಕರ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಬೇಕು, 2018-19ರ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರ ಬಾಕಿ ಹಣ ಸಂದಾಯ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಶಿವಾನಂದ ಹೊಸಳ್ಳಿ, ಸೋಮಣ್ಣ ಎಸ್., ಈರನಗೌಡ ಪಾಟೀಲ, ಯಲಪ್ಪ ತಡಸದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>