ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಕರ ಅಪಘಾತ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಸಾವು

Last Updated 26 ಜನವರಿ 2020, 10:31 IST
ಅಕ್ಷರ ಗಾತ್ರ

ಧಾರವಾಡ: ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪ ಬಳಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ.

ಇಂಡಿಕಾ ಕಾರಿನಲ್ಲಿ ಹೊರಟಿದ್ದ ಸ್ವಾಮೀಜಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದರು. ಅಪಘಾತದಲ್ಲಿ ಸ್ವಾಮೀಜಿ ಹಾಗೂ ಚಿಕ್ಕೊಡಿ ತಾಲ್ಲೂಕಿ ಕಬ್ಬೂರು ಗ್ರಾಮದ ಚಾಲಕ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಬಸಪ್ಪ ಪೂಜಾರ, ಸಿದ್ದಪ್ಪ ಇಂಗಳಳ್ಳಿ, ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಸಂಬಂಧಿ ಸೋಮಣ್ಣ ದೇಸಾಯಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಹೆಸರು ತಿಳಿದು ಬಂದಿಲ್ಲ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕ್ರೇನ್ ಸಹಾಯದಿಂದ ಕಾರುಗಳನ್ನು ಪಕ್ಕಕ್ಕೆ ಸರಿಸಿ, ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT