ಇಂಡಿಕಾ ಕಾರಿನಲ್ಲಿ ಹೊರಟಿದ್ದ ಸ್ವಾಮೀಜಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದರು. ಅಪಘಾತದಲ್ಲಿ ಸ್ವಾಮೀಜಿ ಹಾಗೂ ಚಿಕ್ಕೊಡಿ ತಾಲ್ಲೂಕಿ ಕಬ್ಬೂರು ಗ್ರಾಮದ ಚಾಲಕ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಬಸಪ್ಪ ಪೂಜಾರ, ಸಿದ್ದಪ್ಪ ಇಂಗಳಳ್ಳಿ, ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಸಂಬಂಧಿ ಸೋಮಣ್ಣ ದೇಸಾಯಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.