ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ನಾಲ್ಕು ಕಡೆ ಹೊಸ ಕ್ರಿಕೆಟ್‌ ಕ್ರೀಡಾಂಗಣ: ಮೆನನ್‌

Last Updated 16 ಡಿಸೆಂಬರ್ 2019, 20:13 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮುಂಬರುವ ದಿನಗಳಲ್ಲಿ ದಾವಣಗೆರೆ, ಹಾಸನ, ಗದಗ ಮತ್ತು ಕೊಡಗಿನಲ್ಲಿ ಕ್ರಿಕೆಟ್‌ ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಕಾರ್ಯದರ್ಶಿ ಸಂತೋಷ್‌ ಮೆನನ್‌ ಹೇಳಿದರು.

ಸೋಮವಾರ ಇಲ್ಲಿ ನಡೆದ ಕೆ.ಎಸ್‌.ಸಿ.ಎ ಧಾರವಾಡ ವಲಯದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು ‘ಹಾಸನ, ದಾವಣಗೆರೆ ಮತ್ತು ಗದಗಿನಲ್ಲಿ ಸಮತಟ್ಟಾದ ಭೂಮಿ ಸಿಕ್ಕಿರುವುದರಿಂದ ಅಲ್ಲಿ ಮೈದಾನ ನಿರ್ಮಾಣ ಬೇಗ ಮುಗಿಯುತ್ತದೆ. ಕೊಡಗಿನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಒಂದೆರೆಡು ವರ್ಷ ಬೇಕಾಗುತ್ತದೆ. ಆರಂಭಿಕ ಹಂತದಲ್ಲಿ ಈ ಎಲ್ಲ ಊರುಗಳಲ್ಲಿ ಪಂದ್ಯವಾಡಲು ಅನುಕೂಲವಾಗುವಂತೆ ಮೈದಾನ ನಿರ್ಮಿಸಲಾಗುವುದು. ಎರಡನೇ ಹಂತದಲ್ಲಿ ಪೆವಿಲಿಯನ್‌ ಮತ್ತು ಇನ್ನಿತರ ಸೌಲಭ್ಯ ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT