‘ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು, ಹುಬ್ಬಳ್ಳಿ ನಿಲ್ದಾಣಕ್ಕೆ ರಾಣಿ ಚನ್ನಮ್ಮ, ಕಲಬುರ್ಗಿ ನಿಲ್ದಾಣಕ್ಕೆ ಬಸವಣ್ಣ, ಮಂಗಳೂರು ನಿಲ್ದಾಣಕ್ಕೆ ರಾಣಿ ಅಬ್ಬಕ್ಕ, ಮೈಸೂರು ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ನಾಮಕರಣ ಮಾಡಬೇಕು. ಅದೇ ರೀತಿ, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ, ತುಮಕೂರು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದೇವರ ಹೆಸರಿಡಬೇಕು. ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಹೆಸರು ನಾಮಕರಣ ಮಾಡಬೇಕು ಎಂಬ ಬೇಡಿಕೆಗಳನ್ನು ಒಕ್ಕೂಟ ಸರ್ಕಾರದ ಮುಂದಿಡಲಿದೆ. 18ರಂದು ರ್ಯಾಲಿ ಬೆಂಗಳೂರು ತಲುಪಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಹೇಳಿದರು.