<p><strong>ಹುಬ್ಬಳ್ಳಿ</strong>: ಇಂಧನ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಪ್ರತಿಭಟನೆ ನಡೆಸಲಿ ಎಂದು ಶಾಸಕ ಪ್ರಸಾದ ಅಬ್ಬಯ್ಯ ಸವಾಲು ಹಾಕಿದ್ದಾರೆ.</p>.<p>ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿಯವರು ವಿರೋಧಿಸಿದರು. ಆದರೆ, ಬೇರೆ ರಾಜ್ಯಗಳಿಂತ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆಯಿದೆ ಎಂಬ ಸಾಮಾನ್ಯ ಜ್ಞಾನವೂ ಬಿಜೆಪಿಗೆ ಇಲ್ಲ. ಬೆಲೆ ಏರಿಕೆಗೆ ಕೇಂದ್ರದ ಆರ್ಥಿಕ ನೀತಿಯೇ ಕಾರಣ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>ಕಚ್ಚಾ ತೈಲ ದರ ಕಡಿಮೆ ಇದ್ದರೂ, ಕೇಂದ್ರ ಸರ್ಕಾರವು ಇಂಧನ ದರ ನಿಯಂತ್ರಿಸುತ್ತಿಲ್ಲ. ಕೇಂದ್ರದ ದ್ವಂದ್ವ ನೀತಿಯನ್ನು ಬಿಜೆಪಿಯವರು ಅರಿತುಕೊಂಡು, ನಂತರ ರಾಜ್ಯ ಸರ್ಕಾರಕ್ಕೆ ಪಾಠ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಕೇಂದ್ರದ ದುರಾಡಳಿತದಿಂದ ತರಕಾರಿ ಹಾಗೂ ಬೇಳೆ ಕಾಳುಗಳ ಬೆಲೆ ಒಂದೂವರೆ ಪಟ್ಟು ಹೆಚ್ಚಾಗಿದೆ. ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿದೆ. ಜೀವ ವಿಮೆ, ಆರೋಗ್ಯ ವಿಮೆ, ಕೃಷಿ ಉತ್ಪನ್ನಗಳ ಮೇಲೂ ತೆರಿಗೆ ಭಾರ ಹೇರಲಾಗಿದೆ. 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದವರಿಂದ ದಂಡವಾಗಿ ₹43,500 ಕೋಟಿ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. </p>.<p>ರಾಜ್ಯದ ಬಿಜೆಪಿಯವರಿಗೆ ಜನಪರ ಕಾಳಜಿ ಇದ್ದರೆ, ಬೆಲೆ ಏರಿಕೆ ನಿಯಂತ್ರಣದ ಕುರಿತಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲಿ ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಇಂಧನ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಪ್ರತಿಭಟನೆ ನಡೆಸಲಿ ಎಂದು ಶಾಸಕ ಪ್ರಸಾದ ಅಬ್ಬಯ್ಯ ಸವಾಲು ಹಾಕಿದ್ದಾರೆ.</p>.<p>ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿಯವರು ವಿರೋಧಿಸಿದರು. ಆದರೆ, ಬೇರೆ ರಾಜ್ಯಗಳಿಂತ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆಯಿದೆ ಎಂಬ ಸಾಮಾನ್ಯ ಜ್ಞಾನವೂ ಬಿಜೆಪಿಗೆ ಇಲ್ಲ. ಬೆಲೆ ಏರಿಕೆಗೆ ಕೇಂದ್ರದ ಆರ್ಥಿಕ ನೀತಿಯೇ ಕಾರಣ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>ಕಚ್ಚಾ ತೈಲ ದರ ಕಡಿಮೆ ಇದ್ದರೂ, ಕೇಂದ್ರ ಸರ್ಕಾರವು ಇಂಧನ ದರ ನಿಯಂತ್ರಿಸುತ್ತಿಲ್ಲ. ಕೇಂದ್ರದ ದ್ವಂದ್ವ ನೀತಿಯನ್ನು ಬಿಜೆಪಿಯವರು ಅರಿತುಕೊಂಡು, ನಂತರ ರಾಜ್ಯ ಸರ್ಕಾರಕ್ಕೆ ಪಾಠ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಕೇಂದ್ರದ ದುರಾಡಳಿತದಿಂದ ತರಕಾರಿ ಹಾಗೂ ಬೇಳೆ ಕಾಳುಗಳ ಬೆಲೆ ಒಂದೂವರೆ ಪಟ್ಟು ಹೆಚ್ಚಾಗಿದೆ. ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿದೆ. ಜೀವ ವಿಮೆ, ಆರೋಗ್ಯ ವಿಮೆ, ಕೃಷಿ ಉತ್ಪನ್ನಗಳ ಮೇಲೂ ತೆರಿಗೆ ಭಾರ ಹೇರಲಾಗಿದೆ. 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದವರಿಂದ ದಂಡವಾಗಿ ₹43,500 ಕೋಟಿ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. </p>.<p>ರಾಜ್ಯದ ಬಿಜೆಪಿಯವರಿಗೆ ಜನಪರ ಕಾಳಜಿ ಇದ್ದರೆ, ಬೆಲೆ ಏರಿಕೆ ನಿಯಂತ್ರಣದ ಕುರಿತಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲಿ ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>