ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಈ ಹಗರಣದಿಂದ ಯಾವ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಉದ್ಯಮಿಗಳು ಲಾಭ ಪಡೆದುಕೊಂಡಿದ್ದಾರೆ ಎನ್ನುವುದನ್ನು ಮುಖ್ಯಮಂತ್ರಿ ಬಹಿರಂಗಗೊಳಿಸಬೇಕು. ನಮ್ಮ ಪಕ್ಷದವರು ಹೆಸರುಗಳಿದ್ದರೆ ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿ. ನಾವು ಪಕ್ಷದ ವತಿಯಿಂದಲೂ ಕ್ರಮ ಕೈಗೊಳ್ಳುತ್ತೇವೆ’ ಎಂದರು.