ಮಹಾನಗರ ಪಾಲಿಕೆ ವ್ಯಾಪ್ತಿಯುಲ್ಲಿ ಸ್ಮಾರ್ಟ್ ಸಿಟಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಮುಂದಿನ ದಿನಗಳಲ್ಲಿ ಆ ಕೆಲಸಗಳನ್ನು ಇನ್ನಷ್ಟು ದೊಡ್ಡ ಪ್ರಮಾಣ ಮಾಡಲಾಗುವುದು. ಮತದಾರರು ಹಿಂದೆ ನೀಡಿದ್ದ ಬೆಂಬಲವನ್ನು ಮುಂದೆಯೂ ನೀಡಬೇಕು. ಎಲ್ಲ ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುವುದು. ಬಡವರ ಮತ್ತು ಕೊಳೆಗೇರಿ ನಿವಾಸಿಗಳಿಗೆ ಇನ್ನಷ್ಟು ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.