<p><strong>ಹುಬ್ಬಳ್ಳಿ:</strong> ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚವರಿ ದಟ್ಟಣೆ ನಿರ್ವಹಿಸಲು ನೈರುತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಸೆಂಟ್ರಲ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.</p>.<p>ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು (07341) ಆಗಸ್ಟ್ 26ರಂದು ಸಂಜೆ 4ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 11.45ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ.</p>.<p>ವಿಶೇಷ ರೈಲು (07342) ಆಗಸ್ಟ್ 27ರಂದು ಮಧ್ಯಾಹ್ನ 2.15ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಟು ರಾತ್ರಿ 9.45ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಬರಲಿದೆ. </p>.<p>ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯರಸ್ತೆ, ಕಬಕಪುತ್ತೂರು, ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚವರಿ ದಟ್ಟಣೆ ನಿರ್ವಹಿಸಲು ನೈರುತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಸೆಂಟ್ರಲ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.</p>.<p>ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು (07341) ಆಗಸ್ಟ್ 26ರಂದು ಸಂಜೆ 4ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಿಗ್ಗೆ 11.45ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ.</p>.<p>ವಿಶೇಷ ರೈಲು (07342) ಆಗಸ್ಟ್ 27ರಂದು ಮಧ್ಯಾಹ್ನ 2.15ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಟು ರಾತ್ರಿ 9.45ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಬರಲಿದೆ. </p>.<p>ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯರಸ್ತೆ, ಕಬಕಪುತ್ತೂರು, ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>