<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಗಣೇಶನ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಮನೆಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೊಳ್ಳುತ್ತಿದೆ.</p><p>ನಗರದ ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಯಾಗಲಿರುವ ಗಣೇಶಮೂರ್ತಿ ಮೆರವಣಿಗೆ ಮೂರುಸಾವಿರ ಮಠದ ಆವರಣದಿಂದ ಆರಂಭವಾಗಿದೆ. ಶ್ರೀಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು. ಸಾವಿರಾರು ಭಕ್ತರು ಮೆರವಣಗೆಯಲ್ಲಿ ಪಾಲ್ಗೊಂಡಿದ್ದಾರೆ.</p>.ಗಣೇಶೋತ್ಸವ ಉದ್ಘಾಟನೆ: ನಿವೃತ ಸೈನಿಕರಿಗೆ ಸನ್ಮಾನ.<p>ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ ಮುಖಾಂತರ ರಾಯಣ್ಣ ವೃತ್ತಕ್ಕೆಮೆರವಣಿಗೆ ಬಂದು ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪಂಚವಾದ್ಯ, ಡೋಲು, ಜಾಂಝ್ ಮೇಳಗಳು ಪಾಲ್ಗೊಂಡಿವೆ.</p>.Ganesh Chaturthi: ಸೆ.15ರವರೆಗೆ ಗಣೇಶ ಚಿತ್ರ ಪ್ರದರ್ಶನ.<p>ಭಾರತ ಮಾತೆಯ ಆಳೆತ್ತರದ ಭಾವಚಿತ್ರ, ಭಗವಧ್ವಜ, ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಬಿಜೆಪಿ, ಆರ್ಎಸ್ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿಎಚ್.ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡಿದ್ದಾರೆ.</p><p>ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಡಿಸಿಪಿ ನೇತೃತ್ವ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ, ಸಿಎಆರ್ ತುಕಡಿಗಳು ಪಾಲ್ಗೊಂಡಿವೆ.</p> .ಗೌರಿ ಗಣೇಶೋತ್ಸವ, ಈದ್ ಮಿಲಾದ್ | ಡಿ.ಜೆ ಬಳಕೆಗೆ ಇಲ್ಲ ಅವಕಾಶ: ಸುಂದರ್ ರಾಜ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಗಣೇಶನ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಮನೆಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೊಳ್ಳುತ್ತಿದೆ.</p><p>ನಗರದ ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಯಾಗಲಿರುವ ಗಣೇಶಮೂರ್ತಿ ಮೆರವಣಿಗೆ ಮೂರುಸಾವಿರ ಮಠದ ಆವರಣದಿಂದ ಆರಂಭವಾಗಿದೆ. ಶ್ರೀಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು. ಸಾವಿರಾರು ಭಕ್ತರು ಮೆರವಣಗೆಯಲ್ಲಿ ಪಾಲ್ಗೊಂಡಿದ್ದಾರೆ.</p>.ಗಣೇಶೋತ್ಸವ ಉದ್ಘಾಟನೆ: ನಿವೃತ ಸೈನಿಕರಿಗೆ ಸನ್ಮಾನ.<p>ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ ಮುಖಾಂತರ ರಾಯಣ್ಣ ವೃತ್ತಕ್ಕೆಮೆರವಣಿಗೆ ಬಂದು ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪಂಚವಾದ್ಯ, ಡೋಲು, ಜಾಂಝ್ ಮೇಳಗಳು ಪಾಲ್ಗೊಂಡಿವೆ.</p>.Ganesh Chaturthi: ಸೆ.15ರವರೆಗೆ ಗಣೇಶ ಚಿತ್ರ ಪ್ರದರ್ಶನ.<p>ಭಾರತ ಮಾತೆಯ ಆಳೆತ್ತರದ ಭಾವಚಿತ್ರ, ಭಗವಧ್ವಜ, ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಬಿಜೆಪಿ, ಆರ್ಎಸ್ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿಎಚ್.ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡಿದ್ದಾರೆ.</p><p>ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಡಿಸಿಪಿ ನೇತೃತ್ವ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ, ಸಿಎಆರ್ ತುಕಡಿಗಳು ಪಾಲ್ಗೊಂಡಿವೆ.</p> .ಗೌರಿ ಗಣೇಶೋತ್ಸವ, ಈದ್ ಮಿಲಾದ್ | ಡಿ.ಜೆ ಬಳಕೆಗೆ ಇಲ್ಲ ಅವಕಾಶ: ಸುಂದರ್ ರಾಜ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>