ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಗಣೇಶ ಚತುರ್ಥಿ ಹಬ್ಬ | ಪೆಂಡಾಲ್‌: ಅನಧಿಕೃತ ಜಾಹೀರಾತು ನಿಷೇಧ

ಶೀಘ್ರ ರೌಡಿ ಪರೇಡ್‌, ಡ್ರೋನ್‌ ಕ್ಯಾಮೆರಾಗಳಿಂದ ಚಿತ್ರೀಕರಣಕ್ಕೆ ಕ್ರಮ
ನಾಗರಾಜ್‌ ಬಿ.ಎನ್‌.
Published : 1 ಸೆಪ್ಟೆಂಬರ್ 2024, 6:04 IST
Last Updated : 1 ಸೆಪ್ಟೆಂಬರ್ 2024, 6:04 IST
ಫಾಲೋ ಮಾಡಿ
Comments
ಪಾಲಿಕೆಯಿಂದ ಅನುಮತಿ ಪಡೆಯದೇ ಪೆಂಡಾಲ್‌ಗಳಲ್ಲಿ ಜಾಹೀರಾತು ಬ್ಯಾನರ್‌ ಫ್ಲೆಕ್ಸ್‌ ಅಳವಡಿಸುವಂತಿಲ್ಲ. ಆ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು
ಈಶ್ವರ ಉಳ್ಳಾಗಡ್ಡಿ ಆಯುಕ್ತ ಹುಬ್ಬಳ್ಳಿ–ಧಾರವಾಡ ಮಹಾನಗರ
ಮುಲಾಜಿಲ್ಲದೆ ಕಠಿಣ ಕ್ರಮ: ಕಮಿಷನರ್‌
‘ಮುಂಜಾಗ್ರತಾ ಕ್ರಮವಾಗಿ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಕುರಿತು ಇನ್‌ಸ್ಪೆಕ್ಟರ್‌ ಜೊತೆ ಚರ್ಚಿಸಲಾಗಿದೆ. ಹಬ್ಬದ ಸಂದರ್ಭ ವಿವಿಧ ಇಲಾಖೆಗಳ ಜೊತೆ ಸಂಪರ್ಕದಲ್ಲಿದ್ದು ಅಗತ್ಯ ಸಹಕಾರ ಪಡೆಯಲು ತೀರ್ಮಾನಿಸಲಾಗಿದೆ’ ಎಂದು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ತಿಳಿಸಿದರು. ‘ಠಾಣಾ ವ್ಯಾಪ್ತಿಯಲ್ಲಿ ಎಲ್ಲ ಸಮುದಾಯದವರ ಜೊತೆ ಸೌಹಾರ್ದ ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಲಾಗುತ್ತಿದೆ. ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿರುವ ರೌಡಿಗಳ ಬಾಂಡ್‌ ಅವಧಿ ಮುಕ್ತಾಯವಾಗಿದ್ದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT