ಮೆರವಣಿಗೆ; ಬಿಗಿ ಬಂದೋಬಸ್ತ್
ಅವಳಿನಗರದ ಸುಮಾರು 900ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಸಾರ್ವಜನಿಕ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ಬೃಹತ್ ಮೆರವಣಿಗೆ ಮೂಲಕ ಅದ್ಧೂರಿಯಾಗಿ ಮೂರ್ತಿಗಳನ್ನು ವಿಸರ್ಜನೆ ಮಾಡುತ್ತಾರೆ. ಪ್ರಸ್ತುತ ವರ್ಷ ಈದ್ ಮೀಲಾದ್ ಮತ್ತು ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಒಂದೇ ದಿನ(ಸೆ. 28) ನಡೆಯುವುದರಿಂದ ಪೊಲೀಸ್ ಇಲಾಖೆ ಮೆರವಣಿಗೆಗೆ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲು ನಿರ್ಧರಿಸಿದೆ. ಮೂರು ವರ್ಷಗಳ ಹಿಂದೆ ಗಣೇಶಮೂರ್ತಿ ವಿಸರ್ಜನೆ ವೇಳೆ 10ಕ್ಕೂ ಹೆಚ್ಚು ಚಾಕು ಇರಿತದ ಪ್ರಕರಣಗಳು ನಡೆದಿದ್ದು ಚರ್ಚೆಗೆ ಕಾರಣವಾಗಿತ್ತು.