ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿ ಪ್ರತಿಷ್ಠಾಪಿಸಿದ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಆರಂಭವಾಗಿದೆ.
ವಾದ್ಯ ಮೇಳ ಮತ್ತು ಕಲಾತಂಡಗಳು ಪಾಲ್ಗೊಂಡಿವೆ. ಹಿಂದೂ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಭಗವಧ್ವಜ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಮೈದಾನದ ಸುತ್ತ ಹಾಗೂ ಮೆರವಣಿಗೆ ಸಾಗುವ ಮಾರ್ಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಿ, ಬಿಗಿ ಭದ್ರತೆ ನೀಡಲಾಗಿದೆ.
ಮೆರವಣಿಗೆ ರಾಯಣ್ಣ ವೃತ್ತ, ಚನ್ನಮ್ಮ ವೃತ್ತದ, ಬಸವನ ಮುಖಾಂತರ ಸಾಗಿ ಇಂದಿರಾ ಗಾಜಿನ ಮನೆಯ ಹಿಂಭಾಗದಲ್ಲಿರುವ ಗಜಾನನ ಬಾವಿಯಲ್ಲಿ ಮೂರ್ತಿ ವಿಸರ್ಜಿಸಲಾಗುತ್ತದೆ.