ಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್ ಮಾತನಾಡಿ, ‘ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಪ್ರತಿಷ್ಠಾಪಿಸಬೇಕು ಎಂದು ಪ್ರತಿವರ್ಷ ಮನವಿ ಸಲ್ಲಿಸಲಾಗುತ್ತಿದೆ. ಆದರೆ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈ ವರ್ಷವಾದರೂ, ಪಾಲಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಮೂರು ದಿನ ಹಬ್ಬ ಆಚರಿಸಬೇಕು. ಇಲ್ಲದಿದ್ದರೆ ನಮಗೆ ಅವಕಾಶ ಕೊಡಬೇಕು’ ಎಂದು ಒತ್ತಾಯಿಸಿದರು.