<p><strong>ಉಪ್ಪಿನಬೆಟಗೇರಿ</strong>: ಧಾರವಾಡ ತಾಲ್ಲೂಕಿನ ಕಲ್ಲೆ ಗ್ರಾಮದ ಮನೆಯೊಂದರಲ್ಲಿ ಬುಧವಾರ ಬೆಳಿಗ್ಗೆ ಅಡುಗೆ ಅನಿಲ ಸಿಲೆಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.</p>.<p>ಮಹಾದೇವಿ ವಗೆಣ್ಣವರ (30) ಮೃತ ಮಹಿಳೆ. ಅವರ ಪತಿ ಸುರೇಶ ವಗೆಣ್ಣವರ, ಮಗ ಶ್ರೀಧರ ವಗೆಣ್ಣವರ, ಮಾವ ಚೆನ್ನಪ್ಪ ವಗೆಣ್ಣವರ ಹಾಗೂ ಅತ್ತೆ ಗಂಗವ್ವ ವಗೆಣ್ಣವರ ಗಾಯಗೊಂಡವರು. ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅನಿಲ ಸೋರಿಕೆಯಾಗಿ ಮನೆಯ ತುಂಬ ಆವರಿಸಿದೆ. ಇದು ಗೊತ್ತಾಗದ ಮಹಿಳೆಗೆ ಚಹ ಮಾಡಲೆಂದು ಒಲೆ ಹೊತ್ತಿಸಲು ಹೋದಾಗ ಅನಾಹುತ ಸಂಭವಿಸಿದೆ. ಅಕ್ಕ–ಪಕ್ಕದ ಮನೆಯವರು ಗೋಡೆ ಮತ್ತು ಚಾವಣಿ ಒಡೆದು ಜನ ಮತ್ತು ದನ ಕರುಗಳನ್ನು ರಕ್ಷಿಸಿದ್ದಾರೆ.</p>.<p>ಸವದತ್ತಿ, ಧಾರವಾಡ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಮನೆ ಸೇರಿದಂತೆ ದಿನ ಬಳಕೆಯ ವಸ್ತುಗಳು, ಹೊಲಿಗೆ ಯಂತ್ರ, ಇನ್ನಿತರ ಸಾಮಗ್ರಿ ಸುಟ್ಟು ಕರಕಲಾಗಿವೆ.</p>.<p>ಧಾರವಾಡ ತಹಶೀಲ್ದಾರ್ ಡಿ.ಎಚ್.ಹೂಗಾರ, ಗರಗ ಪಿಎಸ್ಐ ಬಿ.ಎನ್.ಸಾತನ್ನವರ, ಹುಬ್ಬಳ್ಳಿ ಅಗ್ನಿಶಾಮಕದಳದ ಸಿ.ಎಫ್.ಒ. ರವೀಪ್ರಸಾದ, ಅಮ್ಮಿನಬಾವಿ ಕಂದಾಯ ನಿರೀಕ್ಷಕ ಎಸ್.ಎಂ.ಗುರುವಡೆಯರ, ಪಿಡಿಒ ಶಕುಂತಲಾ ಭಜಂತ್ರಿ, ಗ್ರಾಮ ಆಡಳಿತಾಧಿಕಾರಿ ಕವಿತಾ ಬೆಂಗೇರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಬೆಟಗೇರಿ</strong>: ಧಾರವಾಡ ತಾಲ್ಲೂಕಿನ ಕಲ್ಲೆ ಗ್ರಾಮದ ಮನೆಯೊಂದರಲ್ಲಿ ಬುಧವಾರ ಬೆಳಿಗ್ಗೆ ಅಡುಗೆ ಅನಿಲ ಸಿಲೆಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.</p>.<p>ಮಹಾದೇವಿ ವಗೆಣ್ಣವರ (30) ಮೃತ ಮಹಿಳೆ. ಅವರ ಪತಿ ಸುರೇಶ ವಗೆಣ್ಣವರ, ಮಗ ಶ್ರೀಧರ ವಗೆಣ್ಣವರ, ಮಾವ ಚೆನ್ನಪ್ಪ ವಗೆಣ್ಣವರ ಹಾಗೂ ಅತ್ತೆ ಗಂಗವ್ವ ವಗೆಣ್ಣವರ ಗಾಯಗೊಂಡವರು. ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಅನಿಲ ಸೋರಿಕೆಯಾಗಿ ಮನೆಯ ತುಂಬ ಆವರಿಸಿದೆ. ಇದು ಗೊತ್ತಾಗದ ಮಹಿಳೆಗೆ ಚಹ ಮಾಡಲೆಂದು ಒಲೆ ಹೊತ್ತಿಸಲು ಹೋದಾಗ ಅನಾಹುತ ಸಂಭವಿಸಿದೆ. ಅಕ್ಕ–ಪಕ್ಕದ ಮನೆಯವರು ಗೋಡೆ ಮತ್ತು ಚಾವಣಿ ಒಡೆದು ಜನ ಮತ್ತು ದನ ಕರುಗಳನ್ನು ರಕ್ಷಿಸಿದ್ದಾರೆ.</p>.<p>ಸವದತ್ತಿ, ಧಾರವಾಡ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಮನೆ ಸೇರಿದಂತೆ ದಿನ ಬಳಕೆಯ ವಸ್ತುಗಳು, ಹೊಲಿಗೆ ಯಂತ್ರ, ಇನ್ನಿತರ ಸಾಮಗ್ರಿ ಸುಟ್ಟು ಕರಕಲಾಗಿವೆ.</p>.<p>ಧಾರವಾಡ ತಹಶೀಲ್ದಾರ್ ಡಿ.ಎಚ್.ಹೂಗಾರ, ಗರಗ ಪಿಎಸ್ಐ ಬಿ.ಎನ್.ಸಾತನ್ನವರ, ಹುಬ್ಬಳ್ಳಿ ಅಗ್ನಿಶಾಮಕದಳದ ಸಿ.ಎಫ್.ಒ. ರವೀಪ್ರಸಾದ, ಅಮ್ಮಿನಬಾವಿ ಕಂದಾಯ ನಿರೀಕ್ಷಕ ಎಸ್.ಎಂ.ಗುರುವಡೆಯರ, ಪಿಡಿಒ ಶಕುಂತಲಾ ಭಜಂತ್ರಿ, ಗ್ರಾಮ ಆಡಳಿತಾಧಿಕಾರಿ ಕವಿತಾ ಬೆಂಗೇರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>