ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ‘ದಿನದಿಂದ ದಿನಕ್ಕೆ ಜನರಲ್ಲಿ ಅಧ್ಯಾತ್ಮಿಕ ಮೌಲ್ಯಗಳ ಪತನವಾಗುತ್ತಿದ್ದು, ಸಾಕಷ್ಟು ಸಮಸ್ಯೆಗಳು ಹುಟ್ಟಿಕೊಂಡಿವೆ. ಇದರಿಂದಾಗಿ ರಾಷ್ಟ್ರೀಯ ಭಾವೈಕ್ಯದ ಕೊರತೆ ಕಾಡುತ್ತಿದೆ. ಮೊದಲಿಂದಲೂ ಅಧ್ಯಾತ್ಮಿಕ ಮೌಲ್ಯಗಳು ಉಳಿದಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಭಗವದ್ಗೀತೆಯಲ್ಲಿ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ಸಮಸ್ಯೆಗಳಿಗೆ ಉತ್ತರಗಳಿವೆ. ಹಾಗಾಗಿ, ನಾವು ಭಗವದ್ಗೀತಾ ಅಭಿಯಾನವನ್ನು ಶುರು ಮಾಡಿದ್ದೇವೆ. ಜಿಲ್ಲೆಯಾದ್ಯಂತ 800ಕ್ಕೂ ಹೆಚ್ಚು ಶ್ಲೋಕ ಕೇಂದ್ರಗಳಲ್ಲಿ ಗೀತೆಯ 8ನೇ ಅಧ್ಯಾಯದ ಪಾರಾಯಣ ನಡೆದಿದ್ದು, 200ಕ್ಕೂ ಹೆಚ್ಚು ಉಪನ್ಯಾಸಗಳನ್ನು ನಡೆಸಲಾಗಿದೆ’ ಎಂದರು.