ಬಳಿಕ ಮಾತನಾಡಿದ ಅವರು, ‘ಕೋವಿಡ್–19 ಆರಂಭದಲ್ಲಿ ದಿನಪತ್ರಿಕೆಗಳಿಂದಲೂ ಸೋಂಕು ಹರಡಲಿದೆ ಎಂದು ಗಾಳಿಸುದ್ದಿ ಹಬ್ಬಿಸಲಾಗಿತ್ತು. ಇದರಿಂದಾಗಿ ಅನೇಕ ಓದುಗರು ದಿನಪತ್ರಿಕೆಗಳನ್ನು ಖರೀದಿಸುವುದನ್ನೇ ನಿಲ್ಲಿಸಿದ್ದರು. ಇದರಿಂದಾಗಿ, ವಿತರಕರು ಆರ್ಥಿಕ ತೊಂದರೆಗೆ ಸಿಲುಕಿದ್ದರು. ಆದರೂ, ಎದೆಗುಂದದೆ ದಿನಪತ್ರಿಕೆಗಳಿಂದ ಸೋಂಕು ಹರಡುವುದಿಲ್ಲ ಎಂದು ಜಾಗೃತಿ ಮೂಡಿಸಿ, ತಮ್ಮ ಕಾಯಕವನ್ನು ಮುಂದುವರಿಸಿದರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.