<p><strong>ಹುಬ್ಬಳ್ಳಿ: </strong>ದೇಶಪಾಂಡೆ ನಗರದ ಜಿಮ್ಖಾನಾ ಮೈದಾನ ಸಾರ್ವಜನಿಕ ಸ್ಥಳವಾಗಿದ್ದು, ಅಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ ಎಂದು ಹುಬ್ಬಳ್ಳಿ ಸ್ಪೋರ್ಟ್ಸ್ ಗ್ರೌಂಡ್ ಬಚಾವೋ ಸಮಿತಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಇಲ್ಲಿನ ಮೂರನೇ ಜೆಎಂಎಫ್ಸಿ ಕೋರ್ಟ್ ಎತ್ತಿ ಹಿಡಿದಿದೆ.</p>.<p>ಈ ಅರ್ಜಿಯನ್ನು ಪರಿಗಣಿಸಬಾರದು ಎಂದು ಕರ್ನಾಟಕ ಜಿಮ್ಖಾನಾ ಸಂಸ್ಥೆ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿ ಸೋಮವಾರ ತಿರಸ್ಕತಗೊಂಡಿದ್ದು, ಮಾ. 18ರಿಂದ ವಿಚಾರಣೆ ನಡೆಸಲು ಕೋರ್ಟ್ ನಿರ್ಧರಿಸಿದೆ.</p>.<p>ಜಿಮ್ಖಾನಾ ಮೈದಾನವನ್ನು ಜಿಮ್ಖಾನಾ ಸಂಸ್ಥೆ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುತ್ತಿದೆ ಎಂದು ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಸೇರಿ 13 ಮಂದಿ ಹೋರಾಟ ನಡೆಸಿದ್ದರು. ಸಂಸ್ಥೆಯವರು ಅಕ್ರಮವಾಗಿ ಮೈದಾನ ಪ್ರವೇಶ ಮಾಡಿದ್ದಾರೆ. ಇದಕ್ಕೆ ನಿರ್ಬಂಧ ಹೇರಬೇಕು ಎಂದು ಹೇಳಿದ್ದರು.</p>.<p>ಮಹಾನಗರ ಪಾಲಿಕೆಯಿಂದ ಪರವಾನಗಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ. ಸರ್ಕಾರ ಇದನ್ನು ತನ್ನ ವಶಕ್ಕೆ ಪಡೆಯಬೇಕು ಎಂದು ಪುಟ್ಟಪ್ಪ ಹಾಗೂ ಅವರ ತಂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಆರೋಪ ನಿರಾಧಾರವಾಗಿದ್ದು, ಅರ್ಜಿ ತಿರಸ್ಕರಿಸಬೇಕು ಎಂದು ಜಿಮ್ಖಾನಾ ಸಂಸ್ಥೆಯ ಪರ ಇರುವವರು ಆಕ್ಷೇಪಣೆ ಸಲ್ಲಿಸಿದ್ದರು.</p>.<p>‘ಗ್ರೌಂಡ್ ಬಚಾವೋ ಸಮಿತಿ ಸಲ್ಲಿಸಿದ ಮಧ್ಯಂತರ ಅರ್ಜಿಗೆ ನಾವು ಆಕ್ಷೇಪಣೆ ಸಲ್ಲಿಸಿದ್ದೇವು. ಕೋರ್ಟ್ ಅದನ್ನು ವಜಾಗೊಳಿಸಿದೆಯಷ್ಟೇ. ಮೂಲ ಪ್ರಕರಣ ವಿಚಾರಣೆ ನ್ಯಾಯಾಲಯದಲ್ಲಿ ಬಾಕಿಯಿದೆ’ ಎಂದು ಜಿಮ್ಖಾನಾ ಸಂಸ್ಥೆ ಅಧ್ಯಕ್ಷ ವೀರಣ್ಣ ಸವಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ದೇಶಪಾಂಡೆ ನಗರದ ಜಿಮ್ಖಾನಾ ಮೈದಾನ ಸಾರ್ವಜನಿಕ ಸ್ಥಳವಾಗಿದ್ದು, ಅಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ ಎಂದು ಹುಬ್ಬಳ್ಳಿ ಸ್ಪೋರ್ಟ್ಸ್ ಗ್ರೌಂಡ್ ಬಚಾವೋ ಸಮಿತಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಇಲ್ಲಿನ ಮೂರನೇ ಜೆಎಂಎಫ್ಸಿ ಕೋರ್ಟ್ ಎತ್ತಿ ಹಿಡಿದಿದೆ.</p>.<p>ಈ ಅರ್ಜಿಯನ್ನು ಪರಿಗಣಿಸಬಾರದು ಎಂದು ಕರ್ನಾಟಕ ಜಿಮ್ಖಾನಾ ಸಂಸ್ಥೆ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿ ಸೋಮವಾರ ತಿರಸ್ಕತಗೊಂಡಿದ್ದು, ಮಾ. 18ರಿಂದ ವಿಚಾರಣೆ ನಡೆಸಲು ಕೋರ್ಟ್ ನಿರ್ಧರಿಸಿದೆ.</p>.<p>ಜಿಮ್ಖಾನಾ ಮೈದಾನವನ್ನು ಜಿಮ್ಖಾನಾ ಸಂಸ್ಥೆ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುತ್ತಿದೆ ಎಂದು ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಸೇರಿ 13 ಮಂದಿ ಹೋರಾಟ ನಡೆಸಿದ್ದರು. ಸಂಸ್ಥೆಯವರು ಅಕ್ರಮವಾಗಿ ಮೈದಾನ ಪ್ರವೇಶ ಮಾಡಿದ್ದಾರೆ. ಇದಕ್ಕೆ ನಿರ್ಬಂಧ ಹೇರಬೇಕು ಎಂದು ಹೇಳಿದ್ದರು.</p>.<p>ಮಹಾನಗರ ಪಾಲಿಕೆಯಿಂದ ಪರವಾನಗಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ. ಸರ್ಕಾರ ಇದನ್ನು ತನ್ನ ವಶಕ್ಕೆ ಪಡೆಯಬೇಕು ಎಂದು ಪುಟ್ಟಪ್ಪ ಹಾಗೂ ಅವರ ತಂಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಆರೋಪ ನಿರಾಧಾರವಾಗಿದ್ದು, ಅರ್ಜಿ ತಿರಸ್ಕರಿಸಬೇಕು ಎಂದು ಜಿಮ್ಖಾನಾ ಸಂಸ್ಥೆಯ ಪರ ಇರುವವರು ಆಕ್ಷೇಪಣೆ ಸಲ್ಲಿಸಿದ್ದರು.</p>.<p>‘ಗ್ರೌಂಡ್ ಬಚಾವೋ ಸಮಿತಿ ಸಲ್ಲಿಸಿದ ಮಧ್ಯಂತರ ಅರ್ಜಿಗೆ ನಾವು ಆಕ್ಷೇಪಣೆ ಸಲ್ಲಿಸಿದ್ದೇವು. ಕೋರ್ಟ್ ಅದನ್ನು ವಜಾಗೊಳಿಸಿದೆಯಷ್ಟೇ. ಮೂಲ ಪ್ರಕರಣ ವಿಚಾರಣೆ ನ್ಯಾಯಾಲಯದಲ್ಲಿ ಬಾಕಿಯಿದೆ’ ಎಂದು ಜಿಮ್ಖಾನಾ ಸಂಸ್ಥೆ ಅಧ್ಯಕ್ಷ ವೀರಣ್ಣ ಸವಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>