ಸಮುದಾಯದ ಹಿರಿಯರು ನೂರಾರು ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದರಿಂದ, ಸಂಸ್ಥೆಯು ಉನ್ನತ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ರಾಷ್ಟ್ರಮಟ್ಟದಲ್ಲಿ ಬೆಳೆದಿದೆ. ವೈದ್ಯಕೀಯ ಸೀಟು ಪಡೆಯಲು ಸಮುದಾಯದ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಕಷ್ಟಪಡುತ್ತಿದ್ದಾರೆ. ಹಾಗಾಗಿ, ಒಕ್ಕೂಟ ಕೆಲ ನಿರ್ಣಯಗಳನ್ನು ಕೈಗೊಂಡಿದ್ದು ಸಂಸ್ಥೆ ಅದನ್ನು ಪಾಲಿಸಬೇಕು ಎಂದು ಒಕ್ಕೂಟದ ಅಧ್ಯಕ್ಷ ಡಾ. ಶರಣಪ್ಪ ಕೋಟಗಿ, ಪದಾಧಿಕಾರಿಗಳಾದ ಬಂಗಾರೇಶ ಹಿರೇಮಠ, ರಾಜಶೇಖರ ಮೆಣಸಿನಕಾಯಿ, ಸುರೇಶ ಸವಣೂರ, ಪ್ರಕಾಶಗೌಡ ಪಾಟೀಲ, ಡಾ. ಶಿವಯೋಗಿ ತೆಂಗಿನಕಾಯಿ, ಎಂ.ಪಿ. ಶಿವಕುಮಾರ್, ಶೈಲಜಾ ಹಿರೇಮಠ, ರಾಜಶೇಖರ್ ಕಲ್ಯಾಣಶೆಟ್ಟರ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.