ಕೆಪಿಸಿಸಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಎಫ್.ಎಚ್. ಜಕ್ಕಪ್ಪನವರ ಮಾತನಾಡಿ ‘ಪಂಚಾಯ್ತಿಗಳಿಗೆ ಈಗ ಸಾಕಷ್ಟು ಅಧಿಕಾರವಿದೆ. ಆದ್ದರಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಸಿಇಒಗಳು ದಕ್ಷತೆಯಿಂದ ಕೆಲಸ ಮಾಡಿ ದುರ್ಬಲ ವರ್ಗದವರಿಗೆ ಸೌಲಭ್ಯಗಳನ್ನು ಕೊಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.