<p><strong>ಹುಬ್ಬಳ್ಳಿ</strong>: ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಜಿ.ಕೆ. ಗೋವಿಂದರಾವ್ ಕನ್ನಡದ ಮೇಲೆ ಅಪಾರ ಹಿಡಿತ ಹೊಂದಿದ್ದರು. ಕನ್ನಡದಲ್ಲಿ ಹಲವು ಕೃತಿಗಳನ್ನು ರಚಿಸಿದ್ದ ಅವರದ್ದು ಬಹುಮಖ ಪ್ರತಿಭೆ. ಸಾಹಿತ್ಯದ ಜೊತೆಗೆ ನಾಟಕರಂಗದಲ್ಲೂ ಸಕ್ರಿಯರಾಗಿದ್ದರು. ಅವರು ಈ ನಾಡಿನ ಸಾಂಸ್ಕೃತಿಕ ಚಿಂತಕರಾಗಿದ್ದರು ಎಂದು ಸಾಹಿತಿ ಡಾ. ಶ್ಯಾಮಸುಂದರ ಬಿದರಕುಂದಿ ಹೇಳಿದರು.</p>.<p>ನಗರದ ಎಸ್ಜೆಎಂವಿಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ, ಕನ್ನಡ ವಿಭಾಗ ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕಾಲೇಜು ಶಿಕ್ಷಕರ ಸಂಘ ಜಂಟಿಯಾಗಿ ಆಯೋಜಿಸಿದ್ದ ಪ್ರೊ. ಜಿ.ಕೆ.ಗೋವಿಂದರಾವ್ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಗೋವಿಂದರಾವ್ ಅವರ ಸಾಹಿತ್ಯ ಕೃಷಿ ಅಪಾರವಾದದ್ದು, ಈಶ್ವರಅಲ್ಲಾ ಎಂಬ ಕಿರು ಕಾದಂಬರಿ ಸೇರಿದಂತೆ ಅನೇಕ ಮೌಲಿಕ ಕೃತಿಗಳನ್ನು ಜಗತ್ತಿಗೆ ನೀಡಿದ್ದಾರೆ. ಪ್ರಗತಿಪರ ಆಲೋಚನೆಗಳನ್ನು ಹೊಂದಿ ಆ ಮೂಲಕ ಇಡೀ ತಮ್ಮ ಜೀವನವನ್ನು ಸಮಾಜದ ಏಳಿಗೆಗಾಗಿ ಮೀಸಲಿಟ್ಟಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಸೇರಿದಂತೆ ಹಲವಾರು ಧಾರವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸುವ ಮೂಲಕ ನಾಡಿಗೆ ಚಿರಪರಿಚಿತರಾಗಿದ್ದರು’ ಎಂದು ಹೇಳಿದರು.</p>.<p>ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಎಸ್.ನವಲಗುಂದ, ಡಾ. ಸುಪ್ರಿಯಾ ಮಲಶೆಟ್ಟಿ, ಪ್ರೊ. ಶಿವಕುಮಾರ ಬನ್ನಿಹಟ್ಟಿ, ಪ್ರೊ. ಅಣ್ಣಪ್ಪ ಕೊರವರ, ಪ್ರೊ. ಶಿವಕುಮಾರ ಪ್ರಭಯ್ಯನವರಮಠ, ಶ್ವೇತಾ ಬಡಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಜಿ.ಕೆ. ಗೋವಿಂದರಾವ್ ಕನ್ನಡದ ಮೇಲೆ ಅಪಾರ ಹಿಡಿತ ಹೊಂದಿದ್ದರು. ಕನ್ನಡದಲ್ಲಿ ಹಲವು ಕೃತಿಗಳನ್ನು ರಚಿಸಿದ್ದ ಅವರದ್ದು ಬಹುಮಖ ಪ್ರತಿಭೆ. ಸಾಹಿತ್ಯದ ಜೊತೆಗೆ ನಾಟಕರಂಗದಲ್ಲೂ ಸಕ್ರಿಯರಾಗಿದ್ದರು. ಅವರು ಈ ನಾಡಿನ ಸಾಂಸ್ಕೃತಿಕ ಚಿಂತಕರಾಗಿದ್ದರು ಎಂದು ಸಾಹಿತಿ ಡಾ. ಶ್ಯಾಮಸುಂದರ ಬಿದರಕುಂದಿ ಹೇಳಿದರು.</p>.<p>ನಗರದ ಎಸ್ಜೆಎಂವಿಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ, ಕನ್ನಡ ವಿಭಾಗ ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕಾಲೇಜು ಶಿಕ್ಷಕರ ಸಂಘ ಜಂಟಿಯಾಗಿ ಆಯೋಜಿಸಿದ್ದ ಪ್ರೊ. ಜಿ.ಕೆ.ಗೋವಿಂದರಾವ್ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಗೋವಿಂದರಾವ್ ಅವರ ಸಾಹಿತ್ಯ ಕೃಷಿ ಅಪಾರವಾದದ್ದು, ಈಶ್ವರಅಲ್ಲಾ ಎಂಬ ಕಿರು ಕಾದಂಬರಿ ಸೇರಿದಂತೆ ಅನೇಕ ಮೌಲಿಕ ಕೃತಿಗಳನ್ನು ಜಗತ್ತಿಗೆ ನೀಡಿದ್ದಾರೆ. ಪ್ರಗತಿಪರ ಆಲೋಚನೆಗಳನ್ನು ಹೊಂದಿ ಆ ಮೂಲಕ ಇಡೀ ತಮ್ಮ ಜೀವನವನ್ನು ಸಮಾಜದ ಏಳಿಗೆಗಾಗಿ ಮೀಸಲಿಟ್ಟಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಸೇರಿದಂತೆ ಹಲವಾರು ಧಾರವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸುವ ಮೂಲಕ ನಾಡಿಗೆ ಚಿರಪರಿಚಿತರಾಗಿದ್ದರು’ ಎಂದು ಹೇಳಿದರು.</p>.<p>ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಎಸ್.ನವಲಗುಂದ, ಡಾ. ಸುಪ್ರಿಯಾ ಮಲಶೆಟ್ಟಿ, ಪ್ರೊ. ಶಿವಕುಮಾರ ಬನ್ನಿಹಟ್ಟಿ, ಪ್ರೊ. ಅಣ್ಣಪ್ಪ ಕೊರವರ, ಪ್ರೊ. ಶಿವಕುಮಾರ ಪ್ರಭಯ್ಯನವರಮಠ, ಶ್ವೇತಾ ಬಡಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>