ಹುಬ್ಬಳ್ಳಿ: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಪ್ರಚಾರ ಸಂಚಾಲಕರಾಗಿದ್ದ ಮಾ. ನಾಗರಾಜ ಅವರ ವಿರುದ್ಧ ಸಾಮಾಜಿಕ ತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ‘ಮಾ ನಾಗರಾಜ್ ಹಠಾವೊ, ಧಾರವಾಡ ಬಿಜೆಪಿ ಬಚಾವೊ’ ಎಂದು ಕೆಲ ಬಿಜೆಪಿ ಬೆಂಬಲಿಗರು ಫೇಸ್ಬುಕ್ನಲ್ಲಿ ಬರೆದುಕೊಂಡು ಅಭಿಯಾನ ನಡೆಸುತ್ತಿದ್ದಾರೆ.