<p><strong>ಹುಬ್ಬಳ್ಳಿ:</strong> ‘ಅದಾನಿ, ಜೆಎಸ್ಡಬ್ಲ್ಯು ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದಲೇ ನೈರುತ್ಯ ರೈಲ್ವೆ ವಾಸ್ಕೋದಿಂದ ಹೊಸಪೇಟೆವರೆಗೆ ಜೋಡಿ ಹಳಿ ಕಾಮಗಾರಿ ನಡೆಸಲು ಮುಂದಾಗಿದೆ’ ಎಂದು ಗೋವಾದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ನ ದಿಗಂಬರ ಕಾಮತ್ ಆರೋಪಿಸಿದರು.</p>.<p>ನಗರದ ರೈಲು ಸೌಧದ ಎದುರು ಮಂಗಳವಾರ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಪ್ರತಿಭಟನೆ ನಡೆಸಿದ ಅವರು, ತಕ್ಷಣ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ರೈಲ್ವೆ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.</p>.<p>‘ಗೋವಾ ಚಿಕ್ಕ ರಾಜ್ಯ. ಈಗಾಗಲೇ ಅಭಿವೃದ್ಧಿಪರ ಯೋಜನೆಗಳಿಂದಾಗಿ ಸಾಕಷ್ಟು ಭೂಮಿ ಕಳೆದುಕೊಂಡಿದೆ. ಈ ನಡುವೆಯೇ ನೈರುತ್ಯ ರೈಲ್ವೆ, ಜೋಡಿ ಹಳಿ ಮಾರ್ಗ ನಿರ್ಮಿಸಲು ಭೂಸ್ವಾಧೀನಕ್ಕೆ ಮುಂದಾಗಿದೆ. ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶಕ್ಕೂ ಹಾನಿಯಾಗಲಿದೆ’ ಎಂದು ಅವರು ಸುದ್ದಿಗಾರರೆದುರು ಆತಂಕ ವ್ಯಕ್ತಪಡಿಸಿದರು.</p>.<p>‘ಈಗಿರುವ ರೈಲು ಮಾರ್ಗದಲ್ಲಿ ಪ್ರತಿನಿತ್ಯ ನಾಲ್ಕು ಎಕ್ಸ್ಪ್ರೆಸ್ ರೈಲು ಹಾಗೂ ಮೂರು ಲೋಕಲ್ ರೈಲು ಸಂಚರಿಸುತ್ತವೆ. ಜನರ ಓಡಾಟಕ್ಕೆ ಇಷ್ಟು ಸಾಕು’ ಎಂದರು.</p>.<p>ಗೋವಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಿರೀಶ ಚೌಡನಕರ್ ಮಾತನಾಡಿ, ‘ಹೆಚ್ಚುವರಿ ಹಳಿ ಕಾಮಗಾರಿಯಿಂದ ಸುಮಾರು 200ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರ ಮಾಡಬೇಕಾಗುತ್ತದೆ. ಅಲ್ಲದೆ, ಈಗಾಗಲೇ ಕೈಗೆತ್ತಿಕೊಂಡಿರುವ ವಿದ್ಯುತ್, ರೈಲು ಮಾರ್ಗ ಯೋಜನೆಯಿಂದ 63 ಸಾವಿರ ಮರಗಳು ನಾಶವಾಗಲಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಅದಾನಿ, ಜೆಎಸ್ಡಬ್ಲ್ಯು ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದಲೇ ನೈರುತ್ಯ ರೈಲ್ವೆ ವಾಸ್ಕೋದಿಂದ ಹೊಸಪೇಟೆವರೆಗೆ ಜೋಡಿ ಹಳಿ ಕಾಮಗಾರಿ ನಡೆಸಲು ಮುಂದಾಗಿದೆ’ ಎಂದು ಗೋವಾದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ನ ದಿಗಂಬರ ಕಾಮತ್ ಆರೋಪಿಸಿದರು.</p>.<p>ನಗರದ ರೈಲು ಸೌಧದ ಎದುರು ಮಂಗಳವಾರ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಪ್ರತಿಭಟನೆ ನಡೆಸಿದ ಅವರು, ತಕ್ಷಣ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ರೈಲ್ವೆ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.</p>.<p>‘ಗೋವಾ ಚಿಕ್ಕ ರಾಜ್ಯ. ಈಗಾಗಲೇ ಅಭಿವೃದ್ಧಿಪರ ಯೋಜನೆಗಳಿಂದಾಗಿ ಸಾಕಷ್ಟು ಭೂಮಿ ಕಳೆದುಕೊಂಡಿದೆ. ಈ ನಡುವೆಯೇ ನೈರುತ್ಯ ರೈಲ್ವೆ, ಜೋಡಿ ಹಳಿ ಮಾರ್ಗ ನಿರ್ಮಿಸಲು ಭೂಸ್ವಾಧೀನಕ್ಕೆ ಮುಂದಾಗಿದೆ. ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶಕ್ಕೂ ಹಾನಿಯಾಗಲಿದೆ’ ಎಂದು ಅವರು ಸುದ್ದಿಗಾರರೆದುರು ಆತಂಕ ವ್ಯಕ್ತಪಡಿಸಿದರು.</p>.<p>‘ಈಗಿರುವ ರೈಲು ಮಾರ್ಗದಲ್ಲಿ ಪ್ರತಿನಿತ್ಯ ನಾಲ್ಕು ಎಕ್ಸ್ಪ್ರೆಸ್ ರೈಲು ಹಾಗೂ ಮೂರು ಲೋಕಲ್ ರೈಲು ಸಂಚರಿಸುತ್ತವೆ. ಜನರ ಓಡಾಟಕ್ಕೆ ಇಷ್ಟು ಸಾಕು’ ಎಂದರು.</p>.<p>ಗೋವಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಿರೀಶ ಚೌಡನಕರ್ ಮಾತನಾಡಿ, ‘ಹೆಚ್ಚುವರಿ ಹಳಿ ಕಾಮಗಾರಿಯಿಂದ ಸುಮಾರು 200ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರ ಮಾಡಬೇಕಾಗುತ್ತದೆ. ಅಲ್ಲದೆ, ಈಗಾಗಲೇ ಕೈಗೆತ್ತಿಕೊಂಡಿರುವ ವಿದ್ಯುತ್, ರೈಲು ಮಾರ್ಗ ಯೋಜನೆಯಿಂದ 63 ಸಾವಿರ ಮರಗಳು ನಾಶವಾಗಲಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>