ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲುವ ಗುರಿ: ಕೋನರಡ್ಡಿ

Last Updated 19 ನವೆಂಬರ್ 2021, 1:57 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಿತ್ತೂರು ಕರ್ನಾಟಕ ಭಾಗದಿಂದ ನಮ್ಮ ಪಕ್ಷದ 20 ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರಿ ಹೊಂದಿದ್ದೇವೆ ಎಂದು ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್‌.ಎಚ್‌. ಕೋನರಡ್ಡಿ ಹೇಳಿದರು.

ನಗರದ ಹೊರವಲಯದ ವೈಷ್ಣವಿ ಹೊಟೇಲ್‍ನಲ್ಲಿ ನಡೆದ ಜೆಡಿಎಸ್‌ ವಿವಿಧ ಜಿಲ್ಲೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ‘ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಸ್ವಂತ ಬಲದ ಮೇಲೆ ಅಧಿಕಾರಕ್ಕೇರುವ ಗುರಿ ಹೊಂದಿದೆ. ಪಕ್ಷವನ್ನು ಅಧಿಕಾರಕ್ಕೆ ತರುವ ವಿಚಾರವಾಗಿ ಬಿಡದಿಯಲ್ಲಿ ಕಾರ್ಯಾಗಾರ, ಬೆಂಗಳೂರಿನಲ್ಲಿ ಜಿಲ್ಲಾವಾರು ಜನತಾ ಸಂಗಮ ಹೆಸರಿನಲ್ಲಿ ಸಂಘಟನೆ, ಸದಸ್ಯತ್ವ ಅಭಿಯಾನ ಹೀಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ’ ಎಂದರು.

‍ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ಬಿ.ಬಿ. ಗಂಗಾಧರಮಠ, ಮಹಾನಗರ ಘಟಕದ ಅದ್ಯಕ್ಷ ಗುರುರಾಜ ಹುಣಸೀಮರದ, ಕಾರ್ಯಾಧ್ಯಕ್ಷ ಸಾಧೀಕ ಹಕೀಂ, ವೀರನಗೌಡ ಮರಿಗೌಡ್ರ, ಹಾವೇರಿ ಜಿಲ್ಲಾ ಘಟಕದ ಧ್ಯಕ್ಷ ಮಲ್ಲಿಕಾರ್ಜುನ ಹಲಗೇರಿ, ಗದಗ ಜಿಲ್ಲಾ ಘಟಕದ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ಹಜರತಅಲಿ ಜೋಡಮನಿ, ಹುಬ್ಬಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಣ್ಣ ಹುಬ್ಬಳ್ಳಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT