‘ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 1,18,353 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಅವುಗಳ ವಂತಿಕೆ ₹5 ಲಕ್ಷವನ್ನು ಬಡವರು ಸಂದಾಯ ಮಾಡಲು ಕಷ್ಟಪಡುತ್ತಿದ್ದು, ಈ ಹಿನ್ನೆಲೆಯಲ್ಲಿ ₹4 ಲಕ್ಷವನ್ನು ಸರ್ಕಾರವೇ ಭರಿಸಲು ತೀರ್ಮಾನ ಮಾಡಿದ್ದು, ಒಂದು ಲಕ್ಷವನ್ನು ಮಾತ್ರ ಫಲಾನುಭವಿ ಸಂದಾಯ ಮಾಡಬೇಕಾಗುತ್ತದೆ. ಇದರಿಂದ ಬಡವರಿಗೆ ತುಂಬಾ ಅನುಕೂಲವಾಗಲಿದೆ. ಮುಖ್ಯಮಂತ್ರಿ ಅವರಿಗೆ ಅಭಾರಿಯಾಗಿದ್ದೇನೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.