<p><strong>ಅಳ್ನಾವರ: </strong>ಮಂಗಳವಾರ ರಾತ್ರಿ ಆರಂಭವಾದ ಮಳೆ ಬುಧವಾರ ಬೆಳಗಿನ ಜಾವದವರೆಗೆ ಬಿಟ್ಟು ಬಿಡದೆ ಸುರಿದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.</p>.<p>ಪಟ್ಟಣ ಹಾಗೂ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಉತ್ತಮ ಮಳೆಯಾಗಿದೆ.ಗದ್ದೆಗಳಲ್ಲಿ ನೀರು ನಿಂತಿದೆ. ಭತ್ತ ಹಾಗೂ ಕಬ್ಬು ಬೆಳೆಗೆ ಮಳೆ ಸಹಕಾರಿಯಾಗಿದೆ. ಮಧ್ಯಾಹ್ನದವರೆಗೆ ಅಂಗಡಿಗಳ ಮಾಲೀಕರು ವಹಿವಾಟು ನಡೆಸಿದರು.</p>.<p>ಸಭೆ: ಪಟ್ಟಣ ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ಹಾಗೂ ಅತಿವೃಷ್ಟಿಸಮಿತಿಯ ನೋಡಲ್ ಅಧಿಕಾರಿ ರುದ್ರೇಶ ಅಧಿಕಾರಿಗಳ ಜೊತೆಸಭೆ ನಡೆಸಿದರು.</p>.<p>ಕೋವಿಡ್ಲಸಿಕೆ ಪಡೆಯಲು ಜನರಲ್ಲಿ ಜಾಗೃತಿ ಮೂಡಿಸಬೇಕು, ಪ್ರವಾಹ ಪರಿಸ್ಥಿತಿ ಉಂಟಾದರೆ ತುರ್ತು ಕಾರ್ಯಕ್ಕೆ ಸಜ್ಜಾಗಿರಬೇಕು ಎಂದು ಸೂಚಿಸಿದರು.ಕಳೆದ ವರ್ಷ ಉಂಟಾದ ಅತಿವೃಷ್ಟಿಗೆ ಸಿಲುಕಿದಬಡಾವಣೆಗಳನ್ನು ವೀಕ್ಷಿಸಿದ ಅವರು ಮುಂಜಾಗ್ರತಾಕ್ರಮ ಜರುಗಿಸಲು ಹೇಳಿದರು.</p>.<p>ತುಂಬಿರುವ ಕಾರಣ ಡೌಗಿ ನಾಲಾ ಬಾಂದಾರಾದ ಗೇಟ್ಗಳನ್ನುತೆರೆದು ಹೆಚ್ಚುವರಿ ಹಳ್ಳದ ನೀರನ್ನು ಬಿಡಲಾಗುತ್ತಿದೆ.</p>.<p>ತಹಶೀಲ್ದಾರ್ ಅಮರೇಶ ಪಮ್ಮಾರ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕಿನ ಗ್ರಾಮ ಪಂಚಾಯ್ತಿ ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳ್ನಾವರ: </strong>ಮಂಗಳವಾರ ರಾತ್ರಿ ಆರಂಭವಾದ ಮಳೆ ಬುಧವಾರ ಬೆಳಗಿನ ಜಾವದವರೆಗೆ ಬಿಟ್ಟು ಬಿಡದೆ ಸುರಿದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.</p>.<p>ಪಟ್ಟಣ ಹಾಗೂ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಉತ್ತಮ ಮಳೆಯಾಗಿದೆ.ಗದ್ದೆಗಳಲ್ಲಿ ನೀರು ನಿಂತಿದೆ. ಭತ್ತ ಹಾಗೂ ಕಬ್ಬು ಬೆಳೆಗೆ ಮಳೆ ಸಹಕಾರಿಯಾಗಿದೆ. ಮಧ್ಯಾಹ್ನದವರೆಗೆ ಅಂಗಡಿಗಳ ಮಾಲೀಕರು ವಹಿವಾಟು ನಡೆಸಿದರು.</p>.<p>ಸಭೆ: ಪಟ್ಟಣ ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ಹಾಗೂ ಅತಿವೃಷ್ಟಿಸಮಿತಿಯ ನೋಡಲ್ ಅಧಿಕಾರಿ ರುದ್ರೇಶ ಅಧಿಕಾರಿಗಳ ಜೊತೆಸಭೆ ನಡೆಸಿದರು.</p>.<p>ಕೋವಿಡ್ಲಸಿಕೆ ಪಡೆಯಲು ಜನರಲ್ಲಿ ಜಾಗೃತಿ ಮೂಡಿಸಬೇಕು, ಪ್ರವಾಹ ಪರಿಸ್ಥಿತಿ ಉಂಟಾದರೆ ತುರ್ತು ಕಾರ್ಯಕ್ಕೆ ಸಜ್ಜಾಗಿರಬೇಕು ಎಂದು ಸೂಚಿಸಿದರು.ಕಳೆದ ವರ್ಷ ಉಂಟಾದ ಅತಿವೃಷ್ಟಿಗೆ ಸಿಲುಕಿದಬಡಾವಣೆಗಳನ್ನು ವೀಕ್ಷಿಸಿದ ಅವರು ಮುಂಜಾಗ್ರತಾಕ್ರಮ ಜರುಗಿಸಲು ಹೇಳಿದರು.</p>.<p>ತುಂಬಿರುವ ಕಾರಣ ಡೌಗಿ ನಾಲಾ ಬಾಂದಾರಾದ ಗೇಟ್ಗಳನ್ನುತೆರೆದು ಹೆಚ್ಚುವರಿ ಹಳ್ಳದ ನೀರನ್ನು ಬಿಡಲಾಗುತ್ತಿದೆ.</p>.<p>ತಹಶೀಲ್ದಾರ್ ಅಮರೇಶ ಪಮ್ಮಾರ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕಿನ ಗ್ರಾಮ ಪಂಚಾಯ್ತಿ ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>