<p>ಗುಳೇದಗುಡ್ಡ: ‘ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ ಎಂಬುದೇ ಶಿಕ್ಷಕರ ಮತ್ತು ಇಲಾಖೆಯ ಮುಖ್ಯ ಉದ್ದೇಶವಾಗಿದೆ’ ಎಂದು ಬಾದಾಮಿಯ ಬಿಇಒ ಬಿ.ಎಚ್. ಹಳಗೇರಿ ಹೇಳಿದರು.</p>.<p>ಅವರು ತಾಲ್ಲೂಕಿನ ಹುಲ್ಲಿಕೇರಿ ಎಸ್.ಪಿ. ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2ನೇ ಹಂತದ ಪಿಎಂಶ್ರೀ ಯೋಜನೆಯಡಿ ಮಂಜೂರಾದ ಎಲ್ಕೆಜಿ ಹಾಗೂ ಇಪಿಐಎಂಟಿ ಯೋಜನೆಯಡಿ ಇಂಗ್ಲಿಷ್ ಮಾಧ್ಯಮದ 1ನೇ ತರಗತಿ ಉದ್ಘಾಟಿಸಿ ಮಾತನಾಡಿದರು.</p>.<p>‘ಪಾಲಕರು ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಿ. ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನವರ ಶಾಲಾ ಮಕ್ಕಳಿಂದ ಹಾಗೂ ಶಿಕ್ಷಕರಿಂದ ತಯಾರಿಸಿದ ಕಲಿಕೋಪಕರಣ ಮೇಳದ ಕೊಠಡಿಯನ್ನು ಉದ್ಘಾಟಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಪರ್ವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ ರಾಠೋಡ, ಸರ್ಕಾರಿ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ವಿ. ಜಾಧವ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕರಾದ ರವಿಚಂದ್ರ ಬೇನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. <br /> ಇಲಾಖಾ ಅನುಷ್ಠಾನ ಅಧಿಕಾರಿ ಎಂ.ಸಿ.ನಾಲತವಾಡ, ಭೀಮಶಿ ಕುಂಬಾರ, ಎಸ್.ಎಸ್.ಯಲಿಗಾರ, ಆರ್.ಎಂ.ಬಾಪಟ, ಶಾಲಾ ಶಿಕ್ಷಕರಾದ ಎಸ್.ಎಸ್.ಆಡಿನ, ಎಂ.ಎನ್. ಮುದಗಲ್, ಎನ್.ಎಲ್.ದಂಡಾವತಿ, ಎಲ್.ವಿ. ಚವ್ಹಾಣ, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಳೇದಗುಡ್ಡ: ‘ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತದೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ ಎಂಬುದೇ ಶಿಕ್ಷಕರ ಮತ್ತು ಇಲಾಖೆಯ ಮುಖ್ಯ ಉದ್ದೇಶವಾಗಿದೆ’ ಎಂದು ಬಾದಾಮಿಯ ಬಿಇಒ ಬಿ.ಎಚ್. ಹಳಗೇರಿ ಹೇಳಿದರು.</p>.<p>ಅವರು ತಾಲ್ಲೂಕಿನ ಹುಲ್ಲಿಕೇರಿ ಎಸ್.ಪಿ. ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2ನೇ ಹಂತದ ಪಿಎಂಶ್ರೀ ಯೋಜನೆಯಡಿ ಮಂಜೂರಾದ ಎಲ್ಕೆಜಿ ಹಾಗೂ ಇಪಿಐಎಂಟಿ ಯೋಜನೆಯಡಿ ಇಂಗ್ಲಿಷ್ ಮಾಧ್ಯಮದ 1ನೇ ತರಗತಿ ಉದ್ಘಾಟಿಸಿ ಮಾತನಾಡಿದರು.</p>.<p>‘ಪಾಲಕರು ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಿ. ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನವರ ಶಾಲಾ ಮಕ್ಕಳಿಂದ ಹಾಗೂ ಶಿಕ್ಷಕರಿಂದ ತಯಾರಿಸಿದ ಕಲಿಕೋಪಕರಣ ಮೇಳದ ಕೊಠಡಿಯನ್ನು ಉದ್ಘಾಟಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಪರ್ವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ ರಾಠೋಡ, ಸರ್ಕಾರಿ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ವಿ. ಜಾಧವ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕರಾದ ರವಿಚಂದ್ರ ಬೇನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. <br /> ಇಲಾಖಾ ಅನುಷ್ಠಾನ ಅಧಿಕಾರಿ ಎಂ.ಸಿ.ನಾಲತವಾಡ, ಭೀಮಶಿ ಕುಂಬಾರ, ಎಸ್.ಎಸ್.ಯಲಿಗಾರ, ಆರ್.ಎಂ.ಬಾಪಟ, ಶಾಲಾ ಶಿಕ್ಷಕರಾದ ಎಸ್.ಎಸ್.ಆಡಿನ, ಎಂ.ಎನ್. ಮುದಗಲ್, ಎನ್.ಎಲ್.ದಂಡಾವತಿ, ಎಲ್.ವಿ. ಚವ್ಹಾಣ, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>