ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ₹1.22 ಲಕ್ಷಕ್ಕೆ ಒಂದು ಎಕರೆ ಜಮೀನು ನೀಡುವ ನಿರ್ಧಾರ ಆತಂಕಕಾರಿಯಾದದ್ದು. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಭಾರಿ ನಷ್ಟವಾಗುತ್ತದೆ. ಜಿಂದಾಲ್ ಸಂಸ್ಥೆ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಹಣವನ್ನು ಬಾಕಿ ಉಳಿಸಿಕೊಂಡಿದ್ದು, ಅದನ್ನು ವಸೂಲಿ ಮಾಡಲು ಮೊದಲು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.