<p><strong>ಹುಬ್ಬಳ್ಳಿ:</strong> ಕೋವಿಡ್ ನಡುವೆ ರಾಜ್ಯ ಸರ್ಕಾರ ಎಲ್ಲ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆದರೆ, ಶಿಕ್ಷಕರ ದಿನಾಚರಣೆಗೆ ಕೋವಿಡ್ ನೆಪವೊಡ್ಡಿ ನಿಬಂಧನೆಗಳನ್ನು ಹೇರಿದೆ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.</p>.<p>ಮಹಾನಗರ ಪಾಲಿಕೆ ಮತ್ತು ಲ್ಯಾಮಿಂಗ್ಟನ್ ಶಾಲೆಯ ಸಹಯೋಗದಲ್ಲಿ ಶನಿವಾರ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ‘ಸರ್ಕಾರವೇ ಪ್ರತಿ ವರ್ಷ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ, ಜಿಲ್ಲಾ ಉಸ್ತುವಾರಿಗಳ ಸಮ್ಮುಖದಲ್ಲಿ ದೊಡ್ಡ ಮಟ್ಟದಲ್ಲಿ ಶಿಕ್ಷಕರ ದಿನದ ಕಾರ್ಯಕ್ರಮ ಆಯೋಜಿಸಬೇಕು’ ಎಂದರು.</p>.<p>‘ಶಿಕ್ಷಕರ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು; ಹೀಗಾದರೆ ಮಕ್ಕಳಿಂದ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಲು ಹೇಗೆ ಸಾಧ್ಯ?. ಶಿಕ್ಷಣ ಸಚಿವರು ಈ ಬಗ್ಗೆ ಗಮನಹರಿಸಬೇಕು, ಖಾಲಿ ಉಳಿದ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಶಾಲಾ ಸುಧಾರಣಾ ಸಮಿತಿ ಚೇರ್ಮನ್ ಆಗಿ ನೇಮಕವಾಗಿರುವ ಸುರೇಶ ಕಿಣಿ, ಶಿಕ್ಷಕರಾದ ಜಿ.ಬಿ. ಬೂದನೂರು ಮತ್ತು ಶಕುಂತಲಾ ಎಸ್. ಹೂಗಾರ ಅವರನ್ನು ಸನ್ಮಾನಿಸಲಾಯಿತು. ಲ್ಯಾಮಿಂಗ್ಟನ್ ಶಾಲೆಯ ಪ್ರಮುಖರಾದ ಶಶಿಧರ ಸಾಲಿ, ಎಂ.ಬಿ. ನಾತು, ಸಿ.ಜಿ. ಪಾಟೀಲ, ಎ.ಐ ಕಟಗೇರಿ ಪಾಲ್ಗೊಂಡಿದ್ದರು.</p>.<p class="Subhead"><strong>ಸಂಸ್ಕಾರ ಬೆಳೆಸಿ:</strong> ‘ಈಗಿನ ಮಕ್ಕಳಲ್ಲಿ ಪುಸ್ತಕದ ಜ್ಞಾನ ಹೆಚ್ಚುತ್ತಿದೆ. ಆದರೆ ಸಂಸ್ಕಾರ ಕಲಿಯುತ್ತಿಲ್ಲ. ಹೀಗಾಗಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸಬೇಕು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯ ಜಂಟಿ ಆಶ್ರಯದಲ್ಲಿ ನಗರದ ಘಂಟಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಶಿವಳ್ಳಿಮಠ, ಹುಬ್ಬಳ್ಳಿ ಶಹರ ಕರ್ನಾಟಕ ನೌಕರರ ಸಂಘದ ಅಧ್ಯಕ್ಷ ಪ್ರಲ್ಹಾದ ಗೆಜ್ಜಿ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಚ್. ಜಂಗಳಿ, ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಯು.ಬುದ್ದಿ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ.ಮಳಗಿ, ಇಂಡಿಯನ್ ಬ್ಯಾಂಕ್ ವ್ಯವಸ್ಥಾಪಕ ಹರೀಶ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕೋವಿಡ್ ನಡುವೆ ರಾಜ್ಯ ಸರ್ಕಾರ ಎಲ್ಲ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆದರೆ, ಶಿಕ್ಷಕರ ದಿನಾಚರಣೆಗೆ ಕೋವಿಡ್ ನೆಪವೊಡ್ಡಿ ನಿಬಂಧನೆಗಳನ್ನು ಹೇರಿದೆ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.</p>.<p>ಮಹಾನಗರ ಪಾಲಿಕೆ ಮತ್ತು ಲ್ಯಾಮಿಂಗ್ಟನ್ ಶಾಲೆಯ ಸಹಯೋಗದಲ್ಲಿ ಶನಿವಾರ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ‘ಸರ್ಕಾರವೇ ಪ್ರತಿ ವರ್ಷ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ, ಜಿಲ್ಲಾ ಉಸ್ತುವಾರಿಗಳ ಸಮ್ಮುಖದಲ್ಲಿ ದೊಡ್ಡ ಮಟ್ಟದಲ್ಲಿ ಶಿಕ್ಷಕರ ದಿನದ ಕಾರ್ಯಕ್ರಮ ಆಯೋಜಿಸಬೇಕು’ ಎಂದರು.</p>.<p>‘ಶಿಕ್ಷಕರ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು; ಹೀಗಾದರೆ ಮಕ್ಕಳಿಂದ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಲು ಹೇಗೆ ಸಾಧ್ಯ?. ಶಿಕ್ಷಣ ಸಚಿವರು ಈ ಬಗ್ಗೆ ಗಮನಹರಿಸಬೇಕು, ಖಾಲಿ ಉಳಿದ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಶಾಲಾ ಸುಧಾರಣಾ ಸಮಿತಿ ಚೇರ್ಮನ್ ಆಗಿ ನೇಮಕವಾಗಿರುವ ಸುರೇಶ ಕಿಣಿ, ಶಿಕ್ಷಕರಾದ ಜಿ.ಬಿ. ಬೂದನೂರು ಮತ್ತು ಶಕುಂತಲಾ ಎಸ್. ಹೂಗಾರ ಅವರನ್ನು ಸನ್ಮಾನಿಸಲಾಯಿತು. ಲ್ಯಾಮಿಂಗ್ಟನ್ ಶಾಲೆಯ ಪ್ರಮುಖರಾದ ಶಶಿಧರ ಸಾಲಿ, ಎಂ.ಬಿ. ನಾತು, ಸಿ.ಜಿ. ಪಾಟೀಲ, ಎ.ಐ ಕಟಗೇರಿ ಪಾಲ್ಗೊಂಡಿದ್ದರು.</p>.<p class="Subhead"><strong>ಸಂಸ್ಕಾರ ಬೆಳೆಸಿ:</strong> ‘ಈಗಿನ ಮಕ್ಕಳಲ್ಲಿ ಪುಸ್ತಕದ ಜ್ಞಾನ ಹೆಚ್ಚುತ್ತಿದೆ. ಆದರೆ ಸಂಸ್ಕಾರ ಕಲಿಯುತ್ತಿಲ್ಲ. ಹೀಗಾಗಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸಬೇಕು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯ ಜಂಟಿ ಆಶ್ರಯದಲ್ಲಿ ನಗರದ ಘಂಟಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಶಿವಳ್ಳಿಮಠ, ಹುಬ್ಬಳ್ಳಿ ಶಹರ ಕರ್ನಾಟಕ ನೌಕರರ ಸಂಘದ ಅಧ್ಯಕ್ಷ ಪ್ರಲ್ಹಾದ ಗೆಜ್ಜಿ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಚ್. ಜಂಗಳಿ, ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಯು.ಬುದ್ದಿ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ.ಮಳಗಿ, ಇಂಡಿಯನ್ ಬ್ಯಾಂಕ್ ವ್ಯವಸ್ಥಾಪಕ ಹರೀಶ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>