ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಾಕ್ಡೌನ್ ಮುಂದುವರೆಸುವ ಕುರಿತು ತಜ್ಞರು ನೀಡಿರುವ ವರದಿಯನ್ನು ನಾನು ಗಮನಿಸಿಲ್ಲ. ಸದ್ಯ 24ರವರೆಗೆ ಕಠಿಣ ಲಾಕ್ಡೌನ್ ಜಾರಿಯಲ್ಲಿದೆ. ಸೋಂಕು ಹರಡುವಿಕೆ ತಡೆಗೆ ಲಾಕ್ಡೌನ್ ಮುಂದುವರಿಸುವ ಅಗತ್ಯವಿದ್ದರೆ, ರಾಜ್ಯ ಸರ್ಕಾರ ಆ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಿ’ ಎಂದು ಸಲಹೆ ನೀಡಿದರು.