<p><strong>ಹುಬ್ಬಳ್ಳಿ</strong>: ಕೇಂದ್ರ ಸರ್ಕಾರ ಕೆಲವು ವಸ್ತುಗಳ ಮೇಲಿನ ಸರಕು ಹಾಗೂ ಸೇವಾ ತೆರಿಗೆ (ಜಿಎಸ್ಟಿ) ಕಡಿಮೆ ಮಾಡಿರುವುದನ್ನು ಸ್ವಾಗತಿಸಿ, ಬಿಜೆಪಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ನಗರದ ಸರ್ವೋದಯ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.</p>.<p>ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವ ವಹಿಸಿದ್ದರು. ಜಿಎಸ್ಟಿ ಸರಳಿಕರಣ ಮಾಡಿರುವ ಕುರಿತು ಫಲಕಗಳನ್ನು ಪ್ರದರ್ಶಿಸಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರ ಘೋಷಣೆ ಕೂಗಿದರು.</p>.<p>‘ಕೇಂದ್ರ ಸರ್ಕಾರ ಜಿಎಸ್ಟಿ ಸರಳೀಕರಣ ಮಾಡುವ ಮೂಲಕ ವಿಜಯದಶಮಿ ಹಬ್ಬಕ್ಕೆ ವಿಶೇಷ ಕೊಡುಗೆ ನೀಡಿದೆ. ಕ್ಯಾನ್ಸರ್ ರೋಗಿಗಳಿಗೆ ನೀಡುವ ಔಷಧ ಸೇರಿದಂತೆ 33 ಔಷಧಗಳ ಮೇಲಿನ ಜಿಎಸ್ಟಿ ಸಹ ಕಡಿಮೆ ಮಾಡಲಾಗಿದೆ’ ಎಂದು ಶಾಸಕ ಟೆಂಗಿನಕಾಯಿ ಹೇಳಿದರು.</p>.<p>ಹು–ಧಾ ಮಹಾನಗರ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಭೀರಪ್ಪ ಖಂಡೇಕರ, ಉಮಾ ಮುಕುಂದ ಹಾಗೂ ಮುಖಂಡರಾದ ದತ್ತಮೂರ್ತಿ ಕುಲಕರ್ಣಿ, ಈಶ್ವರಗೌಡ ಪಾಟೀಲ, ರವಿ ನಾಯಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕೇಂದ್ರ ಸರ್ಕಾರ ಕೆಲವು ವಸ್ತುಗಳ ಮೇಲಿನ ಸರಕು ಹಾಗೂ ಸೇವಾ ತೆರಿಗೆ (ಜಿಎಸ್ಟಿ) ಕಡಿಮೆ ಮಾಡಿರುವುದನ್ನು ಸ್ವಾಗತಿಸಿ, ಬಿಜೆಪಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ನಗರದ ಸರ್ವೋದಯ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.</p>.<p>ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವ ವಹಿಸಿದ್ದರು. ಜಿಎಸ್ಟಿ ಸರಳಿಕರಣ ಮಾಡಿರುವ ಕುರಿತು ಫಲಕಗಳನ್ನು ಪ್ರದರ್ಶಿಸಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರ ಘೋಷಣೆ ಕೂಗಿದರು.</p>.<p>‘ಕೇಂದ್ರ ಸರ್ಕಾರ ಜಿಎಸ್ಟಿ ಸರಳೀಕರಣ ಮಾಡುವ ಮೂಲಕ ವಿಜಯದಶಮಿ ಹಬ್ಬಕ್ಕೆ ವಿಶೇಷ ಕೊಡುಗೆ ನೀಡಿದೆ. ಕ್ಯಾನ್ಸರ್ ರೋಗಿಗಳಿಗೆ ನೀಡುವ ಔಷಧ ಸೇರಿದಂತೆ 33 ಔಷಧಗಳ ಮೇಲಿನ ಜಿಎಸ್ಟಿ ಸಹ ಕಡಿಮೆ ಮಾಡಲಾಗಿದೆ’ ಎಂದು ಶಾಸಕ ಟೆಂಗಿನಕಾಯಿ ಹೇಳಿದರು.</p>.<p>ಹು–ಧಾ ಮಹಾನಗರ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಭೀರಪ್ಪ ಖಂಡೇಕರ, ಉಮಾ ಮುಕುಂದ ಹಾಗೂ ಮುಖಂಡರಾದ ದತ್ತಮೂರ್ತಿ ಕುಲಕರ್ಣಿ, ಈಶ್ವರಗೌಡ ಪಾಟೀಲ, ರವಿ ನಾಯಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>