<p><strong>ಗುಡಗೇರಿ</strong>: ಹಾವೇರಿ ಜಿಲ್ಲೆಯ ಶಿಶುನಾಳದಲ್ಲಿರುವ ಶರೀಫರ ಗದ್ದುಗೆಗೂ - ಕುಂದಗೋಳ ತಾಲ್ಲೂಕು ಗುಡಗೇರಿ ಕಲ್ಮಠಕ್ಕೂ ಗುರುಶಿಷ್ಯರ ಸಂಬಂಧ ಬೆಸೆದ ಭಾವೈಕ್ಯದ ಸಂಬಂಧವಿದೆ. ಫೆಬ್ರುವರಿ 26ರಂದು ಆರಂಭವಾದ ಶರೀಫಜ್ಜನ ಜಾತ್ರೆಗೆ ಪ್ರತಿವರ್ಷವೂ ತೆರಳುವ ಕಲ್ಮಠದ ಬಂಡಿಯು ಪವಿತ್ರ ಬಾಂಧವ್ಯದ ಸಂಕೇತವಾಗಿದೆ.</p>.<p>ಕಳಸದ ಗುರುಗೋವಿಂದಭಟ್ಟರ ಮನೆತನದವರು ಗುಡಗೇರಿಯ ಪುರಾತನ ಕಲ್ಮಠದ ಕಲ್ಲೇಶ್ವರನನ್ನು ಪೂಜಿಸುತ್ತಿದ್ದರು. ಗೋವಿಂದಭಟ್ಟರು ಈಶ್ವರ ಪೂಜೆ ನಂತರ ನೂರಾರು ಮಕ್ಕಳಿಗೆ ಈ ಕಲ್ಮಠದಲ್ಲಿಯೇ ವಿದ್ಯೆ ನೀಡುತ್ತಿದ್ದರು. ಶಿಶುನಾಳ ಶರೀಫರು ಇದೇ ಗುರುವಿನ ಬಳಿ -ವಿದ್ಯಾರ್ಜನೆಗಾಗಿ ಬಂದಾಗ ನೂರಾರು -ವಿಘ್ನಗಳ ಮಧ್ಯೆಯೇ ಶರೀಫರಿಗೆ ಗೋವಿಂದಭಟ್ಟರು ಜ್ಞಾನ ನೀಡಿದರು.</p>.<p>ಗುರುಗೋವಿಂದರು ಬ್ರಾಹ್ಮಣ ಜನಾಂಗಕ್ಕೆ ಸೇರಿದವರು, ಶರೀಫರು ಮುಸ್ಲಿಂ. ಆದ್ದರಿಂದ ಶರೀಫರ ವಿದ್ಯಾರ್ಜನೆ ಸಮಯದಲ್ಲಿ ಅನೇಕ ವಿಘ್ನಗಳು ಕಾರತೊಡಗಿದವು.</p>.<p>ಆದರೆ, ಗುರುಗೋವಿಂದರು ಶರೀಫರ ಮೇಲೆ ಆಗಾಧ ಶಿಷ್ಯಪ್ರೇಮ ಬೆಳೆಸಿಕೊಂಡ ಕಾರಣ ತಮ್ಮ ಮಗನಂತೆ ಕಂಡರು. ತಮ್ಮ ಸಂಪ್ರದಾಯದ ಪ್ರಕಾರ ಜನಿವಾರ ಹಾಕಿದಾಗ, ಶರೀಫರು ಭಾವೋದ್ವೇಗದಿಂದ 'ಹಾಕಿದ ಜನಿವಾರವ ಸದ್ಗುರುನಾಥ ಹಾಕಿದ ಜನಿವಾರ...' ಎಂದು ಮನದುಂಬಿ ಹಾಡಿ ಹೊಗಳಿದರು.</p>.<p>ಹೀಗೆ ಗುರು-ಶಿಷ್ಯ ಸಂಬಂಧ ಅನೋನ್ಯಗೊಳಿಸಿದ ಮೂಲ ಕೇಂದ್ರವೇ ಗುಡಗೇರಿ ಕಲ್ಮಠ. ಇಂತಹ ಗುರು-ಶಿಷ್ಯರು ಅನೇಕ ಪವಾಡ ಮಾಡಿ ಜನರಲ್ಲಿ ಆಚ್ಚರಿ ಮೂಡಿಸಿದರು. ಶರೀಫರು ಅನೇಕ ಅನುಭವದ ತತ್ವ ಪದಗಳನ್ನು ರಚಿಸಿದ್ದಾರೆ. ಕಲ್ಮಠ ಕುರಿತು ತಮ್ಮ ಹಾಡಿನಲ್ಲಿ ‘ಗುಡಿಪೂರು ಕಲ್ಲೇಶ್ವರ’ ಎಂದು ಕೊಂಡಾಡಿದ್ದಾರೆ.</p>.<p>ಶಿಶುನಾಳದಲ್ಲಿ ಜಾತ್ರೆ ನಡೆಯಲಿದೆ. ಈ ಗುರು ಶಿಷ್ಯರ ಸವಿನೆನಪಿಗಾಗಿ ಕಲ್ಮಠ ಮಠದಿಂದ ಪ್ರತಿ ವರ್ಷ ಶಿಶುನಾಳ ಜಾತ್ರೆಗೆ ಗುಡಗೇರಿ ಜನತೆ ಬಂಡಿ ಕಟ್ಟಿಕೊಂಡು ಅಜ್ಜನ ಜಾತ್ರೆಗೆ ತೆರಳುತ್ತಾರೆ.</p>.<p>ಗ್ರಾಮದ ದಿ.ವಿಠಪ್ಪ ಮಾಳ್ವದಕರ ಹಾಗೂ ಅವರ ಸಂಗಡಿಗರು ಮೊದಲು ಅಜ್ಜನ ಜಾತ್ರೆಗೆ ಬಿದಿರಿನ ಚಕ್ಕಡಿ ಕಟ್ಟಿಕೊಂಡು ಅದರಲ್ಲಿ ಗೋವಿಂದರು ಹಾಗೂ ಶರೀಫರ ಭಾವಚಿತ್ರ ಇಟ್ಟು ಕೊಂಡು ಹೋಗುತ್ತಿದ್ದರು. ತದನಂತರ ಬಂಡಿಯನ್ನು ಕಟ್ಟಿ, ವಿಶೇಷವಾಗಿ ಆಲಂಕರಿಸಿ ಎತ್ತುಗಳನ್ನು ಹೂಡಿಕೊಂಡು, ಮಂಗಲವಾದ್ಯದೊಂದಿಗೆ ಶಿಶುನಾಳಕ್ಕೆ ತೆರಳುತ್ತಿದ್ದಾರೆ. ಈ ಪರಂಪರೆ ಸುಮಾರು 100 ವಸಂತಗಳನ್ನು ಕಂಡಿದೆ.</p>.<p>ಬಂಡಿಯನ್ನು ಭಜನಾ ಸಂಘದ ಯುವಕರು ನಿರ್ಮಿಸುತ್ತಾರೆ. ಬಂಡಿ ಹಿಂದೆ ರೊಟ್ಟಿ ಚಕ್ಕಡಿಯೂ ತೆರಳುತ್ತದೆ. ಜಾತ್ರೆಯಲ್ಲಿ ಹಸಿದು ಬಂದ ಜನರಿಗೆ ಫೆಬ್ರುವರಿ 26ರಂದು ರೊಟ್ಟಿ, ಖಾರದ ಚಟ್ನಿ ನೀಡಿ ಸಂತೃಪ್ತಿಪಡುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಗೇರಿ</strong>: ಹಾವೇರಿ ಜಿಲ್ಲೆಯ ಶಿಶುನಾಳದಲ್ಲಿರುವ ಶರೀಫರ ಗದ್ದುಗೆಗೂ - ಕುಂದಗೋಳ ತಾಲ್ಲೂಕು ಗುಡಗೇರಿ ಕಲ್ಮಠಕ್ಕೂ ಗುರುಶಿಷ್ಯರ ಸಂಬಂಧ ಬೆಸೆದ ಭಾವೈಕ್ಯದ ಸಂಬಂಧವಿದೆ. ಫೆಬ್ರುವರಿ 26ರಂದು ಆರಂಭವಾದ ಶರೀಫಜ್ಜನ ಜಾತ್ರೆಗೆ ಪ್ರತಿವರ್ಷವೂ ತೆರಳುವ ಕಲ್ಮಠದ ಬಂಡಿಯು ಪವಿತ್ರ ಬಾಂಧವ್ಯದ ಸಂಕೇತವಾಗಿದೆ.</p>.<p>ಕಳಸದ ಗುರುಗೋವಿಂದಭಟ್ಟರ ಮನೆತನದವರು ಗುಡಗೇರಿಯ ಪುರಾತನ ಕಲ್ಮಠದ ಕಲ್ಲೇಶ್ವರನನ್ನು ಪೂಜಿಸುತ್ತಿದ್ದರು. ಗೋವಿಂದಭಟ್ಟರು ಈಶ್ವರ ಪೂಜೆ ನಂತರ ನೂರಾರು ಮಕ್ಕಳಿಗೆ ಈ ಕಲ್ಮಠದಲ್ಲಿಯೇ ವಿದ್ಯೆ ನೀಡುತ್ತಿದ್ದರು. ಶಿಶುನಾಳ ಶರೀಫರು ಇದೇ ಗುರುವಿನ ಬಳಿ -ವಿದ್ಯಾರ್ಜನೆಗಾಗಿ ಬಂದಾಗ ನೂರಾರು -ವಿಘ್ನಗಳ ಮಧ್ಯೆಯೇ ಶರೀಫರಿಗೆ ಗೋವಿಂದಭಟ್ಟರು ಜ್ಞಾನ ನೀಡಿದರು.</p>.<p>ಗುರುಗೋವಿಂದರು ಬ್ರಾಹ್ಮಣ ಜನಾಂಗಕ್ಕೆ ಸೇರಿದವರು, ಶರೀಫರು ಮುಸ್ಲಿಂ. ಆದ್ದರಿಂದ ಶರೀಫರ ವಿದ್ಯಾರ್ಜನೆ ಸಮಯದಲ್ಲಿ ಅನೇಕ ವಿಘ್ನಗಳು ಕಾರತೊಡಗಿದವು.</p>.<p>ಆದರೆ, ಗುರುಗೋವಿಂದರು ಶರೀಫರ ಮೇಲೆ ಆಗಾಧ ಶಿಷ್ಯಪ್ರೇಮ ಬೆಳೆಸಿಕೊಂಡ ಕಾರಣ ತಮ್ಮ ಮಗನಂತೆ ಕಂಡರು. ತಮ್ಮ ಸಂಪ್ರದಾಯದ ಪ್ರಕಾರ ಜನಿವಾರ ಹಾಕಿದಾಗ, ಶರೀಫರು ಭಾವೋದ್ವೇಗದಿಂದ 'ಹಾಕಿದ ಜನಿವಾರವ ಸದ್ಗುರುನಾಥ ಹಾಕಿದ ಜನಿವಾರ...' ಎಂದು ಮನದುಂಬಿ ಹಾಡಿ ಹೊಗಳಿದರು.</p>.<p>ಹೀಗೆ ಗುರು-ಶಿಷ್ಯ ಸಂಬಂಧ ಅನೋನ್ಯಗೊಳಿಸಿದ ಮೂಲ ಕೇಂದ್ರವೇ ಗುಡಗೇರಿ ಕಲ್ಮಠ. ಇಂತಹ ಗುರು-ಶಿಷ್ಯರು ಅನೇಕ ಪವಾಡ ಮಾಡಿ ಜನರಲ್ಲಿ ಆಚ್ಚರಿ ಮೂಡಿಸಿದರು. ಶರೀಫರು ಅನೇಕ ಅನುಭವದ ತತ್ವ ಪದಗಳನ್ನು ರಚಿಸಿದ್ದಾರೆ. ಕಲ್ಮಠ ಕುರಿತು ತಮ್ಮ ಹಾಡಿನಲ್ಲಿ ‘ಗುಡಿಪೂರು ಕಲ್ಲೇಶ್ವರ’ ಎಂದು ಕೊಂಡಾಡಿದ್ದಾರೆ.</p>.<p>ಶಿಶುನಾಳದಲ್ಲಿ ಜಾತ್ರೆ ನಡೆಯಲಿದೆ. ಈ ಗುರು ಶಿಷ್ಯರ ಸವಿನೆನಪಿಗಾಗಿ ಕಲ್ಮಠ ಮಠದಿಂದ ಪ್ರತಿ ವರ್ಷ ಶಿಶುನಾಳ ಜಾತ್ರೆಗೆ ಗುಡಗೇರಿ ಜನತೆ ಬಂಡಿ ಕಟ್ಟಿಕೊಂಡು ಅಜ್ಜನ ಜಾತ್ರೆಗೆ ತೆರಳುತ್ತಾರೆ.</p>.<p>ಗ್ರಾಮದ ದಿ.ವಿಠಪ್ಪ ಮಾಳ್ವದಕರ ಹಾಗೂ ಅವರ ಸಂಗಡಿಗರು ಮೊದಲು ಅಜ್ಜನ ಜಾತ್ರೆಗೆ ಬಿದಿರಿನ ಚಕ್ಕಡಿ ಕಟ್ಟಿಕೊಂಡು ಅದರಲ್ಲಿ ಗೋವಿಂದರು ಹಾಗೂ ಶರೀಫರ ಭಾವಚಿತ್ರ ಇಟ್ಟು ಕೊಂಡು ಹೋಗುತ್ತಿದ್ದರು. ತದನಂತರ ಬಂಡಿಯನ್ನು ಕಟ್ಟಿ, ವಿಶೇಷವಾಗಿ ಆಲಂಕರಿಸಿ ಎತ್ತುಗಳನ್ನು ಹೂಡಿಕೊಂಡು, ಮಂಗಲವಾದ್ಯದೊಂದಿಗೆ ಶಿಶುನಾಳಕ್ಕೆ ತೆರಳುತ್ತಿದ್ದಾರೆ. ಈ ಪರಂಪರೆ ಸುಮಾರು 100 ವಸಂತಗಳನ್ನು ಕಂಡಿದೆ.</p>.<p>ಬಂಡಿಯನ್ನು ಭಜನಾ ಸಂಘದ ಯುವಕರು ನಿರ್ಮಿಸುತ್ತಾರೆ. ಬಂಡಿ ಹಿಂದೆ ರೊಟ್ಟಿ ಚಕ್ಕಡಿಯೂ ತೆರಳುತ್ತದೆ. ಜಾತ್ರೆಯಲ್ಲಿ ಹಸಿದು ಬಂದ ಜನರಿಗೆ ಫೆಬ್ರುವರಿ 26ರಂದು ರೊಟ್ಟಿ, ಖಾರದ ಚಟ್ನಿ ನೀಡಿ ಸಂತೃಪ್ತಿಪಡುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>