ಗುರುಗೋವಿಂದರು ಬ್ರಾಹ್ಮಣ ಜನಾಂಗಕ್ಕೆ ಸೇರಿದವರು, ಶರೀಫರು ಮುಸ್ಲಿಂ. ಆದ್ದರಿಂದ ಶರೀಫರ ವಿದ್ಯಾರ್ಜನೆ ಸಮಯದಲ್ಲಿ ಸಹಪಾಠಿಗಳು ಅವರೊಡನೆ ಸೇರದೇ ಹೀಯಾಳಿಸುತ್ತಿದ್ದರು. ಆದರೆ ಗುರುಗೋವಿಂದರು ಶರೀಫರ ಮೇಲೆ ಅಗಾಧ ಶಿಷ್ಯಪ್ರೇಮ ಗಾಢವಾಗಿ ಬೆಳೆಸಿಕೊಂಡ ಕಾರಣ ತಮ್ಮ ಮಗನಂತೆ ಕಂಡರು. ತಮ್ಮ ಸಂಪ್ರದಾಯದ ಪ್ರಕಾರ ಜನಿವಾರ ಹಾಕಿದಾಗ, ಶರೀಫರು ಭಾವೋದ್ವೇಗದಿಂದ ‘ಹಾಕಿದ ಜನಿವಾರವ ಸದ್ಗುರುನಾಥ ಹಾಕಿದ ಜನಿವಾರವ...’ ಎಂದು ಮನದುಂಬಿ ಹಾಡಿ ಹೊಗಳಿದರು.