ಗುದ್ಲೆಪ್ಪ ಹಳ್ಳಿಕೇರಿ ಜನ್ಮಶತಮಾನೋತ್ಸವ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಾವೀರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್.ಕೆ ಆದಪ್ಪನವರ ಮಾತನಾಡಿ ‘ಹಳ್ಳಿಕೇರಿಯವರು ಉತ್ತರ ಕರ್ನಾಟಕದಿಂದ ಮಹಾತ್ಮ ಗಾಂಧೀಜಿ ಅವರ ಜೊತೆ ಸ್ವಾತಂತ್ರ್ಯ ಹೋರಾಟಕ್ಕೆ ಕೈ ಜೋಡಿಸಿ ರಾಜ್ಯದ ಉಕ್ಕಿನ ಮನುಷ್ಯ ಎಂದು ಹೆಸರಾಗಿದ್ದರು. ಸ್ವಾತಂತ್ರ್ಯ ಚಳವಳಿಯಲ್ಲಿ ಮೈಲಾರ ಮಹಾದೇವಪ್ಪ ಅವರ ಜೊತೆ ಬ್ರಿಟಿಷರ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದ್ದರು’ ಎಂದು ನೆನಪಿಸಿಕೊಂಡರು.