ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರಶಸ್ತಿ

Published 30 ಮೇ 2023, 6:00 IST
Last Updated 30 ಮೇ 2023, 6:00 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಸ್ವರ್ಣ ಸಮೂಹ ಸಂಸ್ಥೆ ವ್ಯವಸ್ಥಾಪಕ ಚಿಗುರುಪಾಟಿ ವೆಂಕಟಸತ್ಯ ವರಪ್ರಸಾದ ಅವರನ್ನು ಹಾವೇರಿ ಜಿಲ್ಲೆ ಹೊಸರಿತ್ತಿಯ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನ ಕೊಡಮಾಡುವ ಗುದ್ಲೆಪ್ಪ ಹಳ್ಳಿಕೇರಿ ಸೇವಾಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಾಮಾಜಿಕ, ಸಾಂಸ್ಕೃತಿಕ ಹಾಗೂ ಪರೋಪಕಾರಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದನ್ನು ಗುರುತಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಧರ್ಮದರ್ಶಿ ವೀರಣ್ಣ ಚಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಜೂನ್ 6ರಂದು ನಡೆಯಲಿರುವ ಗುದ್ಲೆಪ್ಪ ಅವರ 118ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT