<p><strong>ಹುಬ್ಬಳ್ಳಿ:</strong> ‘ಪಕ್ಷದಲ್ಲಿರುವ ತಾವೊಬ್ಬರೇ ಕಾಯಂ ಸಚಿವರಾಗಿರಬೇಕು ಎಂದೇನಿಲ್ಲ. ಸಾಕಷ್ಟು ಮಂದಿ ಹಿರಿಯರು, ಅನುಭವಿಗಳೂ ಇದ್ದಾರೆ. ಅವರಿಗೂ ಅವಕಾಶ ದೊರೆಯಬೇಕು’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅಭಿಪ್ರಾಯಪಟ್ಟರು.</p><p>‘ರಾಜ್ಯದಲ್ಲಿ ಸರ್ಕಾರ ಬಂದು ಈಗಾಗಲೇ ಮೂರು ವರ್ಷ ಸಮೀಪಿಸುತ್ತಿದೆ. ಸಚಿವ ಸಂಪುಟ ಪುನರ್ ರಚನೆಯಾಗಿ, ಉಳಿದವರಿಗೂ ಅಲ್ಲಿ ಅವಕಾಶ ಸಿಗಬೇಕು. ಈ ಕುರಿತು ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಸೂಕ್ತ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದ್ದು, ಶೀಘ್ರದಲ್ಲಿಯೇ ಜಾರಿಗೆಯೂ ಬರಲಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p><p>‘ಸಚಿವ ಸ್ಥಾನ ಕಳೆದುಕೊಳ್ಳುವವರು ಅವಮಾನ ಎಂದು ಭಾವಿಸಬಾರದು. ಎಲ್ಲರಿಗೂ ಅವಕಾಶ ಸಿಗಬೇಕು ಎನ್ನುವ ದೊಡ್ಡತನ ಇಟ್ಟುಕೊಂಡಿರಬೇಕು. ನಾವೆಲ್ಲ ಪಕ್ಷದ ಶಿಸ್ತಿನ ಸಿಫಾಯಿಗಳಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ಮುಕ್ತವಾಗಿ ಒಪ್ಪಿಕೊಳ್ಳುತ್ತೇವೆ’ ಎಂದರು.</p><p>‘ಅಧಿಕಾರ ಹಂಚಿಕೆ ತೀರ್ಮಾನ ಹೈಕಮಾಂಡ್ ಅಂಗಳದಲ್ಲಿದ್ದು, ಅವರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಆ ತೀರ್ಮಾನಕ್ಕೆ ಡಿಸಿಎಂ, ಸಚಿವರು ಹಾಗೂ ಶಾಸಕರು ಬದ್ಧರಾಗಿರುತ್ತಾರೆ. ಬೇರೆ ಯಾರೂ ಮಧ್ಯಪ್ರವೇಶಿಸುವ ಅಗತ್ಯವಿಲ್ಲ’ ಎಂದು ಹೇಳಿದರು.</p><p>‘ಪಕ್ಷದಲ್ಲಿ ಗೊಂದಲವಿದೆ’ ಎನ್ನುವ ಸಚಿವ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಗುಂಡೂರಾವ್, ‘ನಮ್ಮಲ್ಲಿ ಗೊಂದಲವಿಲ್ಲ. ಒಳಮೀಸಲಾತಿ ಕುರಿತು ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲ ಸಚಿವರೂ ಒಪ್ಪಿಗೆ ನೀಡಿದ್ದಾರೆ. ನಾವೆಲ್ಲ ಜೊತೆಯಾಗಿ ಇದ್ದೇವೆ ಎನ್ನಲು ಇದು ಸಾಕ್ಷಿಯಾಗಿದ್ದು, ಎಲ್ಲರೂ ಒಗ್ಗೂಡಿ ಹೋಗುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಪಕ್ಷದಲ್ಲಿರುವ ತಾವೊಬ್ಬರೇ ಕಾಯಂ ಸಚಿವರಾಗಿರಬೇಕು ಎಂದೇನಿಲ್ಲ. ಸಾಕಷ್ಟು ಮಂದಿ ಹಿರಿಯರು, ಅನುಭವಿಗಳೂ ಇದ್ದಾರೆ. ಅವರಿಗೂ ಅವಕಾಶ ದೊರೆಯಬೇಕು’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅಭಿಪ್ರಾಯಪಟ್ಟರು.</p><p>‘ರಾಜ್ಯದಲ್ಲಿ ಸರ್ಕಾರ ಬಂದು ಈಗಾಗಲೇ ಮೂರು ವರ್ಷ ಸಮೀಪಿಸುತ್ತಿದೆ. ಸಚಿವ ಸಂಪುಟ ಪುನರ್ ರಚನೆಯಾಗಿ, ಉಳಿದವರಿಗೂ ಅಲ್ಲಿ ಅವಕಾಶ ಸಿಗಬೇಕು. ಈ ಕುರಿತು ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಸೂಕ್ತ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದ್ದು, ಶೀಘ್ರದಲ್ಲಿಯೇ ಜಾರಿಗೆಯೂ ಬರಲಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p><p>‘ಸಚಿವ ಸ್ಥಾನ ಕಳೆದುಕೊಳ್ಳುವವರು ಅವಮಾನ ಎಂದು ಭಾವಿಸಬಾರದು. ಎಲ್ಲರಿಗೂ ಅವಕಾಶ ಸಿಗಬೇಕು ಎನ್ನುವ ದೊಡ್ಡತನ ಇಟ್ಟುಕೊಂಡಿರಬೇಕು. ನಾವೆಲ್ಲ ಪಕ್ಷದ ಶಿಸ್ತಿನ ಸಿಫಾಯಿಗಳಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ಮುಕ್ತವಾಗಿ ಒಪ್ಪಿಕೊಳ್ಳುತ್ತೇವೆ’ ಎಂದರು.</p><p>‘ಅಧಿಕಾರ ಹಂಚಿಕೆ ತೀರ್ಮಾನ ಹೈಕಮಾಂಡ್ ಅಂಗಳದಲ್ಲಿದ್ದು, ಅವರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಆ ತೀರ್ಮಾನಕ್ಕೆ ಡಿಸಿಎಂ, ಸಚಿವರು ಹಾಗೂ ಶಾಸಕರು ಬದ್ಧರಾಗಿರುತ್ತಾರೆ. ಬೇರೆ ಯಾರೂ ಮಧ್ಯಪ್ರವೇಶಿಸುವ ಅಗತ್ಯವಿಲ್ಲ’ ಎಂದು ಹೇಳಿದರು.</p><p>‘ಪಕ್ಷದಲ್ಲಿ ಗೊಂದಲವಿದೆ’ ಎನ್ನುವ ಸಚಿವ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಗುಂಡೂರಾವ್, ‘ನಮ್ಮಲ್ಲಿ ಗೊಂದಲವಿಲ್ಲ. ಒಳಮೀಸಲಾತಿ ಕುರಿತು ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲ ಸಚಿವರೂ ಒಪ್ಪಿಗೆ ನೀಡಿದ್ದಾರೆ. ನಾವೆಲ್ಲ ಜೊತೆಯಾಗಿ ಇದ್ದೇವೆ ಎನ್ನಲು ಇದು ಸಾಕ್ಷಿಯಾಗಿದ್ದು, ಎಲ್ಲರೂ ಒಗ್ಗೂಡಿ ಹೋಗುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>