<p><strong>ಹುಬ್ಬಳ್ಳಿ</strong>: ‘ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ. ಆದರೆ, ಕೆಲವರು ಸಾಂತ್ವನದ ಹೆಸರಿನಲ್ಲಿ ಅವರ ಮನೆಗೆ ಭೇಟಿ ನೀಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸಾವಿನ ಮನೆಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ’ ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಹೇಳಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ನಮ್ಮ ಆಗ್ರಹ. ಆದರೆ, ಕೊಲೆಯ ನಂತರ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸ್ಆ್ಯಪ್ ಸ್ಟೇಟಸ್ಗಳಲ್ಲಿ ನೇಹಾ ಫಯಾಜ್ ಟ್ರೂ ಲವ್ ಸ್ಟೋರಿ ಎಂದು ಹಾಕುತ್ತಿರುವುದು ಖಂಡನೀಯ’ ಎಂದರು.</p>.<p>‘ಈ ಪ್ರಕರಣಕ್ಕೆ ಲವ್ ಜಿಹಾದ್ ರೂಪ ನೀಡಿ, ಸ್ವಹಿತಾಸಕ್ತಿ ಸಾಧಿಸಲು ಪ್ರಯತ್ನಿಸುತ್ತಿರುವುದು ಅಕ್ಷಮ್ಯ. ಈ ಮೂಲಕ ಕರಾವಳಿ ಮಾದರಿಯಲ್ಲಿ ಅವಳಿ ನಗರದಲ್ಲಿ ಶಾಂತಿ ಕದಡುವ ಕೆಲಸವನ್ನು ರಾಷ್ಟ್ರೀಯ ಪಕ್ಷದ ಪ್ರಮುಖರು ಮಾಡುತ್ತಿದ್ದಾರೆ’ ಎಂದು ಅರೋಪಿಸಿದರು.</p>.<p>‘ಪ್ರತಿಷ್ಠಿತ ಕಾಲೇಜಿನ ಆವರಣದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಶುಲ್ಕ ಪಡೆಯುವ ಸಂಸ್ಥೆ ಅವರ ರಕ್ಷಣೆಗೆ ಕ್ರಮ ಕೈಗೊಳ್ಳದಿರುವುದು ನಿರ್ಲಕ್ಷ್ಯವಲ್ಲವೇ? ವಿದ್ಯಾಸಂಸ್ಥೆ ಸೇರಿದಂತೆ ಅಲ್ಲಿನ ಸೆಕ್ಯುರಿಟಿ ಏಜೆನ್ಸಿ ವಿರುದ್ಧವೂ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು.</p>.<p>ಚುನಾವಣೆ ಮುಗಿದ ನಂತರ ನೇಹಾ ಅವರ ಮನೆಗೆ ಯಾರೂ ಭೇಟಿ ನೀಡುವುದಿಲ್ಲ. ಇದನ್ನು ಅವರ ಮನೆಯವರೂ ಅರ್ಥ ಮಾಡಿಕೊಳ್ಳಬೇಕು ಎಂದರು.</p>.<p>ಕೊಲೆ, ಅತ್ಯಾಚಾರ ಪ್ರಕರಣಗಳನ್ನು ತಡೆಯಲು ಮಠಗಳಿಗೂ ಅನ್ವಯವಾಗುವಂತೆ ಶೀಘ್ರ ವಿಶೇಷ ಕಾನೂನು ಜಾರಿಗೆ ತರಬೇಕು. ಈ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ. ಆದರೆ, ಕೆಲವರು ಸಾಂತ್ವನದ ಹೆಸರಿನಲ್ಲಿ ಅವರ ಮನೆಗೆ ಭೇಟಿ ನೀಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸಾವಿನ ಮನೆಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ’ ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಹೇಳಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ನಮ್ಮ ಆಗ್ರಹ. ಆದರೆ, ಕೊಲೆಯ ನಂತರ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸ್ಆ್ಯಪ್ ಸ್ಟೇಟಸ್ಗಳಲ್ಲಿ ನೇಹಾ ಫಯಾಜ್ ಟ್ರೂ ಲವ್ ಸ್ಟೋರಿ ಎಂದು ಹಾಕುತ್ತಿರುವುದು ಖಂಡನೀಯ’ ಎಂದರು.</p>.<p>‘ಈ ಪ್ರಕರಣಕ್ಕೆ ಲವ್ ಜಿಹಾದ್ ರೂಪ ನೀಡಿ, ಸ್ವಹಿತಾಸಕ್ತಿ ಸಾಧಿಸಲು ಪ್ರಯತ್ನಿಸುತ್ತಿರುವುದು ಅಕ್ಷಮ್ಯ. ಈ ಮೂಲಕ ಕರಾವಳಿ ಮಾದರಿಯಲ್ಲಿ ಅವಳಿ ನಗರದಲ್ಲಿ ಶಾಂತಿ ಕದಡುವ ಕೆಲಸವನ್ನು ರಾಷ್ಟ್ರೀಯ ಪಕ್ಷದ ಪ್ರಮುಖರು ಮಾಡುತ್ತಿದ್ದಾರೆ’ ಎಂದು ಅರೋಪಿಸಿದರು.</p>.<p>‘ಪ್ರತಿಷ್ಠಿತ ಕಾಲೇಜಿನ ಆವರಣದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಶುಲ್ಕ ಪಡೆಯುವ ಸಂಸ್ಥೆ ಅವರ ರಕ್ಷಣೆಗೆ ಕ್ರಮ ಕೈಗೊಳ್ಳದಿರುವುದು ನಿರ್ಲಕ್ಷ್ಯವಲ್ಲವೇ? ವಿದ್ಯಾಸಂಸ್ಥೆ ಸೇರಿದಂತೆ ಅಲ್ಲಿನ ಸೆಕ್ಯುರಿಟಿ ಏಜೆನ್ಸಿ ವಿರುದ್ಧವೂ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು.</p>.<p>ಚುನಾವಣೆ ಮುಗಿದ ನಂತರ ನೇಹಾ ಅವರ ಮನೆಗೆ ಯಾರೂ ಭೇಟಿ ನೀಡುವುದಿಲ್ಲ. ಇದನ್ನು ಅವರ ಮನೆಯವರೂ ಅರ್ಥ ಮಾಡಿಕೊಳ್ಳಬೇಕು ಎಂದರು.</p>.<p>ಕೊಲೆ, ಅತ್ಯಾಚಾರ ಪ್ರಕರಣಗಳನ್ನು ತಡೆಯಲು ಮಠಗಳಿಗೂ ಅನ್ವಯವಾಗುವಂತೆ ಶೀಘ್ರ ವಿಶೇಷ ಕಾನೂನು ಜಾರಿಗೆ ತರಬೇಕು. ಈ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>