‘ಈ ಹಿಂದೆ ರಾಜ್ಯದಲ್ಲಿ ತಮ್ಮ ಸರ್ಕಾರ ಇದ್ದಾಗ ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ಅಮಾಯಕರ ವಿರುದ್ಧ ಪ್ರಕರಣ ದಾಖಲಿಸಿ, ಗೂಂಡಾ ಕಾಯ್ದೆಯಡಿ ಬಂಧಿಸಿದ್ದನ್ನು ಕೇಂದ್ರ ಸಚಿವರು ಮರೆತಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಕಾರಣಕ್ಕೆ ಜನಸ್ಪಂದನ ಹೆಸರಲ್ಲಿ ಪೊಲೀಸ್ ಅಧಿಕಾರಿಯನ್ನು ಅವಮಾನಿಸಿದ್ದು ಸರಿಯಲ್ಲ’ ಎಂದು ಸಂಘಟನೆಯ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ ಹೇಳಿದ್ದಾರೆ.