ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುವಿನಹಳ್ಳಿ ಗ್ರಾ.ಪಂ: ಮಂಜುನಾಥ ಅಧ್ಯಕ್ಷ

Published 7 ಆಗಸ್ಟ್ 2023, 16:51 IST
Last Updated 7 ಆಗಸ್ಟ್ 2023, 16:51 IST
ಅಕ್ಷರ ಗಾತ್ರ

ಕುಂದಗೋಳ: ತಾಲ್ಲೂಕಿನ ಗುರುವಿನಹಳ್ಳಿ ಗ್ರಾಮ ಪಂಚಾಯ್ತಿ 2 ಅವಧಿಗೆ ಅಧ್ಯಕ್ಷರಾಗಿ ಮಂಜುನಾಥ ಬ.ಬೂದಪ್ಪನವರ ಹಾಗೂ ಉಪಾಧ್ಯಕ್ಷರಾಗಿ ರತ್ನವ್ವ ಪಡೆಸೂರ ಅವರು ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಮಂಜುನಾಥ ಬ.ಬೂದಪ್ಪನವರ ಮಾತನಾಡಿ, ‘ಗುರುವಿನಹಳ್ಳಿ ಗ್ರಾ.ಪಂ. ವ್ಯಾಪ್ತಿಗೆ ಒಳ ಪಡುವ ಗ್ರಾಮಗಳಿಗೆ ಪೂರ್ಣ ಪ್ರಮಾಣದಲ್ಲಿ ಸೌರವಿದ್ಯುತ್‌ ದೀಪದ ವ್ಯವಸ್ಥೆ ಹಾಗೂ ಮುಖ್ಯ ಜಾಗಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಹಾಗೂ ರಸ್ತೆ, ಕೆರೆ ಕಟ್ಟೆಗಳು, ಕುಡಿಯುವ ನೀರಿನ ವ್ಯವಸ್ಥೆ ಸೇರಿ ಮೂಲ ಸೌಕರ್ಯಗಳ ಬಗ್ಗೆ ಹೆಚ್ಚಿನ ಒತ್ತು ನೀಡಿ  ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಬಿ.ಬಿ.ಅವಾರಿ, ಅಬ್ದುಲಸಾಬ ಅಕ್ಕಿ, ರಾಜಕುಮಾರ ನವಲೂರ, ಜಯಶ್ರೀ ಮಾಡಲಗಿ,ಕಲ್ಲಮ್ಮ ಇಂಗಳಗಿ,  ಸದಸ್ಯರು ಹಾಗೂ ಪಿಡಿಒ ಬಸವರಾಜ ಬಾಗಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಪೋಟೋ: ಕುಂದಗೋಳ ತಾಲ್ಲೂಕಿನ ಗುರುವಿನಹಳ್ಳಿ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮಂಜುನಾಥ. ಬ.ಬೂದಪ್ಪನವರ ಹಾಗೂ ಉಪಾಧ್ಯಕ್ಷರಾದ ರತ್ನವ್ವ ಪಡೆಸೂರ ಅವರನ್ನು ಸನ್ಮಾನಿಸಲಾಯಿತು.
ಪೋಟೋ: ಕುಂದಗೋಳ ತಾಲ್ಲೂಕಿನ ಗುರುವಿನಹಳ್ಳಿ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮಂಜುನಾಥ. ಬ.ಬೂದಪ್ಪನವರ ಹಾಗೂ ಉಪಾಧ್ಯಕ್ಷರಾದ ರತ್ನವ್ವ ಪಡೆಸೂರ ಅವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT